ಸೇನೆಯಿಂದ ದೇಣಿಗೆ ಚೆಕ್ ಹಸ್ತಾಂತರ 
ದೇಶ

ಕಾಶ್ಮೀರ ಪ್ರವಾಹ: ಸೇನೆ ನೀಡಿದ್ದ 100 ಕೋಟಿ ರೂ ದೇಣಿಗೆ ಪೇಪರ್, ಫೋಟೋಗೆ ಮಾತ್ರ ಸೀಮಿತ!

ಜಮ್ಮು-ಕಾಶ್ಮೀರದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಸೇನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಸ್ತಂತರಿಸಿದ್ದ ಸಂಗ್ರಹ ನಿಧಿ ಕೇವಲ ಫೋಟೋ ಪ್ರದರ್ಶನ ಎಂಬುದು ತಿಳಿದುಬಂದಿದೆ.

ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಪ್ರವಾಹ ಉಂಟಾದ ಸಂದರ್ಭದಲ್ಲಿ ಸೇನೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಸ್ತಂತರಿಸಿದ್ದ ಸಂಗ್ರಹ ನಿಧಿ ಕೇವಲ ಫೋಟೋ ಪ್ರದರ್ಶನ ಎಂಬುದು ತಿಳಿದುಬಂದಿದೆ.

ಪ್ರವಾಹ ಕಾರ್ಯಾಚರಣೆಗೆ ನೆರವು ನೀಡಲು ಮುಂದಾಗಿದ್ದ ಭಾರತೀಯ ಸೇನೆ ತನ್ನ ಎಲ್ಲಾ ಶ್ರೇಣಿಯ ನೌಕರರ ಒಂದು ದಿನದ ವೇತವನ್ನು ಸಂಗ್ರಹಿಸಿ, ಜ.15 ರಂದು 100 ಕೋಟಿ ರೂಪಾಯಿ ಮೊತ್ತದ ಚೆಕ್ ನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹಸ್ತಾಂತರಿಸಿತ್ತು. 

ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಸಮ್ಮುಖದಲ್ಲಿ ಸೇನಾ ಮುಖ್ಯಸ್ಥರು 100 ರೂ ಮೊತ್ತದ ಚೆಕ್ ನ್ನು ಹಸ್ತಾಂತರಿಸಿದ್ದರು. ಸೇನೆ ಹಸ್ತಾಂತರಿಸಿದ್ದ ಮೊತ್ತ ಈವರೆಗೂ ರಾಷ್ಟ್ರೀಯ ಪರಿಹಾರ ನಿಧಿಗೆ ಸೇರಿಲ್ಲ ಎಂಬುದು ಆರ್.ಟಿ.ಐ ಮೂಲಕ ತಿಳಿದುಬಂದಿದೆ. ಈ ಮಾಹಿತಿಯನ್ನು ಕೇಂದ್ರ ಸಾರ್ವಜನಿಕ ಮಾಹಿತಿ ಅಧಿಕಾರಿ ಸ್ಪಷ್ಟಪಡಿಸಿದ್ದಾರೆ.

ಈ ಮಾಹಿತಿ ಬಹಿರಂಗವಾಗಿರುವುದರಿಂದ ರಕ್ಷಣಾ ಸಚಿವಾಲಯಕ್ಕೆ ತೀವ್ರ ಮುಜುಗರ ಉಂಟಾಗಿದೆ. ಜಮ್ಮು-ಕಾಶ್ಮೀರದಲ್ಲಿ ಪ್ರವಾಹ ಉಂಟಾಗಿದ್ದ ಸಂದರ್ಭದಲ್ಲಿ  ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳಲ್ಲಿ ಸೇನೆ ಪ್ರಮುಖ ಪಾತ್ರ ವಹಿಸಿತ್ತು. ಆದರೆ ತಮ್ಮ ಅನುಮತಿ ಇಲ್ಲದೇ ಒಂದು ದಿನದ ವೇತನವನ್ನು  ಕಡಿತಗೊಳಿಸುವುದಕ್ಕೆ 2000 ಕ್ಕೂ ಹೆಚ್ಚು ಸೇನಾ ಅಧಿಕಾರಿಗಳು ವಿರೋಧ ವ್ಯಕ್ತಪಡಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ದಿನದ ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥರು ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟದ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

SCROLL FOR NEXT