ಸಾಧ್ವಿ ನಿರಂಜನ್ ಜ್ಯೋತಿ(ಸಂಗ್ರಹ ಚಿತ್ರ) 
ದೇಶ

ದಾವೂದ್ ನನ್ನು ಕರೆ ತರುವ ವಿಚಾರ; ಬಾಯಿ ಮಾತಿಗಿಂತ, ಕೃತಿ ಮುಖ್ಯ: ಸಾಧ್ವಿ

ಭೂಗತ ಪಾತಕಿ ದಾವೂದ್ ಇಬ್ರಾಹೀಂನನ್ನು ಭಾರತಕ್ಕೆ ವಾಪಸ್‌ ಕರೆ ತರುವ ವಿಚಾರ ಮಾತನಾಡುವುದಲ್ಲ, ಮಾಡುವ ವಿಚಾರ ಎಂದು ಕೇಂದ್ರ...

ಅಹಮದಾಬಾದ್: ಭೂಗತ ಪಾತಕಿ ದಾವೂದ್ ಇಬ್ರಾಹೀಂನನ್ನು ಭಾರತಕ್ಕೆ ವಾಪಸ್‌ ಕರೆ ತರುವ ವಿಚಾರ ಮಾತನಾಡುವುದಲ್ಲ, ಮಾಡುವ ವಿಚಾರ ಎಂದು ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ತಿಳಿಸಿದ್ದಾರೆ.

ದಾವೂದ್ ನನ್ನು ಹಿಡಿಯಲಾಗದು ಎಂದು ದಾವೂದ್ ನ ಆಪ್ತ ಚೋಟಾ ಶಕೀಲ್ ಹೇಳಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಾಧ್ವಿ ಅವರು, ದಾವೂದ್ ಕುರಿತಂತೆ ಸಾಕಷ್ಟು ಮಾತನಾಡಿದ್ದು ಆಗಿದೆ ಮುಂದೇನಿದ್ದರು ಮಾಡುವ ವಿಚಾರ ಮಾತನಾಡುವುದಲ್ಲ ಎಂದು ಹೇಳಿದ್ದಾರೆ.

ದಾವೂದ್ ಶರಣಾಗಲು ಬಯಸಿದ್ದ ಎಂಬ ವಿಚಾರವನ್ನು ಖ್ಯಾತ ಹಿರಿಯ ವಕೀಲ ರಾಂ ಜೇಠ್ಮಲಾನಿ ಅವರು ಹೇಳಿದ್ದರು. ಆದರೆ ಆಗಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶರದ್‌ ಪವಾರ್ ಅವರು ಅದಕ್ಕೆ ಒಪ್ಪಿರಲಿಲ್ಲ ಎಂದೂ ಅವರು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಪವಾರ್, ‘ಆತನ ಶರಣಾಗತಿ ವಿಚಾರವನ್ನು ಜೇಠ್ಮಲಾನಿ ಅವರು ಹೇಳಿದ್ದರು. ಆದರೆ, ಆತನ ಷರತ್ತುಗಳು ಮನ್ನಿಸಲು ಸಾಧ್ಯವಿರಲಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಯುಕ್ರೇನ್-ರಷ್ಯಾ ಶಾಂತಿ ಒಪ್ಪಂದ ಸನಿಹ: ಸುಳಿವು ನೀಡಿದ ಯುಕ್ರೇನ್

2026 T20 ವಿಶ್ವಕಪ್: ಕೊಲಂಬೋದಲ್ಲಿ ಫೆ.15 ರಂದು ಭಾರತ- ಪಾಕ್ ಪಂದ್ಯ

ಕಾರು ಅಪಘಾತದಲ್ಲಿ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಸೇರಿ ಮೂವರು ಸಾವು: ಸಿಎಂ, ಡಿಸಿಎಂ ಸಂತಾಪ

CM ಬದಲಾವಣೆ ನಾಲ್ಕರಿಂದ ಐದು ಜನರ ನಡುವೆ ನಡೆದ "ರಹಸ್ಯ ಒಪ್ಪಂದ": ಡಿಕೆಶಿ​ ಸ್ಫೋಟಕ ಹೇಳಿಕೆ

ರಾಸಾಯನಿಕಗಳು, ಎಲೆಕ್ಟ್ರಾನಿಕ್ ಘಟಕಗಳ ಸುಲಭ ಲಭ್ಯತೆಯಿಂದ ಐಇಡಿ ಅಪಾಯ ಹೆಚ್ಚು: NSG

SCROLL FOR NEXT