ಸಾಧ್ವಿ ನಿರಂಜನ್ ಜ್ಯೋತಿ(ಸಂಗ್ರಹ ಚಿತ್ರ) 
ದೇಶ

ದಾವೂದ್ ನನ್ನು ಕರೆ ತರುವ ವಿಚಾರ; ಬಾಯಿ ಮಾತಿಗಿಂತ, ಕೃತಿ ಮುಖ್ಯ: ಸಾಧ್ವಿ

ಭೂಗತ ಪಾತಕಿ ದಾವೂದ್ ಇಬ್ರಾಹೀಂನನ್ನು ಭಾರತಕ್ಕೆ ವಾಪಸ್‌ ಕರೆ ತರುವ ವಿಚಾರ ಮಾತನಾಡುವುದಲ್ಲ, ಮಾಡುವ ವಿಚಾರ ಎಂದು ಕೇಂದ್ರ...

ಅಹಮದಾಬಾದ್: ಭೂಗತ ಪಾತಕಿ ದಾವೂದ್ ಇಬ್ರಾಹೀಂನನ್ನು ಭಾರತಕ್ಕೆ ವಾಪಸ್‌ ಕರೆ ತರುವ ವಿಚಾರ ಮಾತನಾಡುವುದಲ್ಲ, ಮಾಡುವ ವಿಚಾರ ಎಂದು ಕೇಂದ್ರ ಸಚಿವೆ ಸಾಧ್ವಿ ನಿರಂಜನ್ ಜ್ಯೋತಿ ಅವರು ತಿಳಿಸಿದ್ದಾರೆ.

ದಾವೂದ್ ನನ್ನು ಹಿಡಿಯಲಾಗದು ಎಂದು ದಾವೂದ್ ನ ಆಪ್ತ ಚೋಟಾ ಶಕೀಲ್ ಹೇಳಿಕೆ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಸಾಧ್ವಿ ಅವರು, ದಾವೂದ್ ಕುರಿತಂತೆ ಸಾಕಷ್ಟು ಮಾತನಾಡಿದ್ದು ಆಗಿದೆ ಮುಂದೇನಿದ್ದರು ಮಾಡುವ ವಿಚಾರ ಮಾತನಾಡುವುದಲ್ಲ ಎಂದು ಹೇಳಿದ್ದಾರೆ.

ದಾವೂದ್ ಶರಣಾಗಲು ಬಯಸಿದ್ದ ಎಂಬ ವಿಚಾರವನ್ನು ಖ್ಯಾತ ಹಿರಿಯ ವಕೀಲ ರಾಂ ಜೇಠ್ಮಲಾನಿ ಅವರು ಹೇಳಿದ್ದರು. ಆದರೆ ಆಗಿನ ಮಹಾರಾಷ್ಟ್ರ ಮುಖ್ಯಮಂತ್ರಿ ಶರದ್‌ ಪವಾರ್ ಅವರು ಅದಕ್ಕೆ ಒಪ್ಪಿರಲಿಲ್ಲ ಎಂದೂ ಅವರು ತಿಳಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ್ದ ಪವಾರ್, ‘ಆತನ ಶರಣಾಗತಿ ವಿಚಾರವನ್ನು ಜೇಠ್ಮಲಾನಿ ಅವರು ಹೇಳಿದ್ದರು. ಆದರೆ, ಆತನ ಷರತ್ತುಗಳು ಮನ್ನಿಸಲು ಸಾಧ್ಯವಿರಲಿಲ್ಲ’ ಎಂದು ಅವರು ಸ್ಪಷ್ಟಪಡಿಸಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

IPL 2026: ಬರೊಬ್ಬರಿ 40 ಮಿಲಿಯನ್ ಫಾಲೋವರ್ಸ್ ಇದ್ದ Insta ಖಾತೆ ಡಿಲೀಟ್ ಮಾಡಿದ Hardik Pandya

IPL 2026 Eliminator: ವಿಶ್ವದಾಖಲೆಯ ಹೊಸ್ತಿಲಲ್ಲಿ ಎಡವಿದ Vaibhav Suryavanshi, ಮತ್ತೊಂದು ರೆಕಾರ್ಡ್ ಜಸ್ಟ್ ಮಿಸ್!

SCROLL FOR NEXT