ಅನುಮಾನಾಸ್ಪದವಾಗಿ ಮೃತಪಟ್ಟ ಡಾ. ಅರುಣ್ ಶರ್ಮ(ಸಂಗ್ರಹ ಚಿತ್ರ) 
ದೇಶ

ವ್ಯಾಪಂ ಹಗರಣ: ಪತ್ರಕರ್ತನ ಬೆನ್ನಲ್ಲೇ ಮೆಡಿಕಲ್ ಕಾಲೇಜ್ ಡೀನ್ ಅನುಮಾನಾಸ್ಪದ ಸಾವು

ವ್ಯಾಪಂ ಕುರಿತು ವರದಿ ಮಾಡುತ್ತಿದ್ದ ಪತ್ರಕರ್ತರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬೆನ್ನಲ್ಲೇ ಜಬಲ್ ಪುರ್ ಮೆಡಿಕಲ್ ಕಾಲೇಜ್ ನ ಡೀನ್ ಅನುಮಾನಸ್ಪದವಾಗಿ ಮೃತಪಟ್ಟಿದಾರೆ.

ನವದೆಹಲಿ: ವ್ಯಾಪಂ ಕುರಿತು ವರದಿ ಮಾಡುತ್ತಿದ್ದ ಪತ್ರಕರ್ತರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಬೆನ್ನಲ್ಲೇ ಹಗರಣದಲ್ಲಿ ಶಾಮೀಲಾಗಿದ್ದರೆನ್ನಲಾದ ಜಬಲ್ ಪುರ್ ಮೆಡಿಕಲ್  ಕಾಲೇಜ್ ನ ಡೀನ್ ಅನುಮಾನಸ್ಪದವಾಗಿ ಮೃತಪಟ್ಟಿದಾರೆ.

ಜಬಲ್ ಪುರದಲ್ಲಿರುವ ನೇತಾಜಿ ಸುಭಾಷ್ ಚಂದ್ರ ಬೋಸ್ ಮೆಡಿಕಲ್ ಕಾಲೇಜಿನ ಡೀನ್ ಡಾ. ಅರುಣ್ ಶರ್ಮಾ ಅವರ ಮೃತ ದೇಹ ನವದೆಹಲಿಯ ಹೊಟೆಲ್ ಒಂದರಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಶರ್ಮಾ ಮೃತದೇಹದ ಪಕ್ಕದಲ್ಲೇ ಮದ್ಯದ ಬಾಟಲಿಗಳು ಕಂಡುಬಂದಿದ್ದು, ಅತಿ ಹೆಚ್ಚು ಮದ್ಯ ಸೇವನೆ ಮಾಡಿರುವ ಲಕ್ಷಣಗಳಿವೆ ಎಂದು ಪೋಲಿಸ್ ಅಧಿಕಾರಿಗಳು ತಿಳಿಸಿದ್ದಾರೆ. ಫಾರೆನ್ಸಿಕ್ ಸಾಕ್ಷ್ಯಗಳನ್ನು ಕಲೆಹಾಕಿರುವ ಪೊಲೀಸರು ಶರ್ಮಾ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಿಸಿದ್ದಾರೆ.

ನಿಗೂಢವಾಗಿ ಸಾವನ್ನಪ್ಪಿರುವ ಡಾ. ಅರುಣ್ ಶರ್ಮಾ ಅವರಿಗೂ ಮಧ್ಯಪ್ರದೇಶದಲ್ಲಿ ನಡೆದಿರುವ ವ್ಯಾಪಂ ಹಗರಣಕ್ಕೂ ಸಂಬಂಧವಿತ್ತು ಎಂಬ ಆರೋಪ ಕೇಳಿಬಂದಿದೆ. ಈ ದೃಷ್ಟಿಯಿಂದಲೂ ಶರ್ಮಾ ನಿಗೂಢ ಸಾವಿನ ಪ್ರಕರಣವನ್ನು ತನಿಖೆ ನಡೆಸುವುದಾಗಿ ಪೊಲೀಸರು ತಿಳಿಸಿದ್ದಾರೆ. ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ ಪತ್ರಕರ್ತನೂ ಸೇರಿ ಈ ವರೆಗೂ ಸುಮಾರು 25 ಆರೋಪಿಗಳು ಹಾಗೂ ಸಾಕ್ಷಿಗಳು ಸಾವನ್ನಪ್ಪಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT