ಅಕ್ಷಯ್ ಸಿಂಗ್ 
ದೇಶ

ವರದಿಗಾರ ಅಕ್ಷಯ್‌ ಸಿಂಗ್ ಸಂಸ್ಕಾರದಲ್ಲಿ ರಾಹುಲ್, ಕೇಜ್ರಿವಾಲ್ ಭಾಗಿ

ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ (ವ್ಯಾಪಂ) ನೇಮಕಾತಿ ಹಗರಣದ ತನಿಖಾ ವರದಿಗಾರ ಅಕ್ಷಯ್ ಸಿಂಗ್‌ ಅವರ ಅಂತ್ಯ ಸಂಸ್ಕಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ...

ನವದೆಹಲಿ: ಮಧ್ಯಪ್ರದೇಶ ವೃತ್ತಿಪರ ಪರೀಕ್ಷಾ ಮಂಡಳಿ (ವ್ಯಾಪಂ) ನೇಮಕಾತಿ ಹಗರಣದ ತನಿಖಾ ವರದಿಗಾರ ಅಕ್ಷಯ್ ಸಿಂಗ್‌ ಅವರ ಅಂತ್ಯ ಸಂಸ್ಕಾರದಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಾಲ್ಗೊಂಡಿದ್ದರು.

38 ವರ್ಷದ ಅಕ್ಷಯ್ ಸಿಂಗ್ ಅವರ ಅಂತ್ಯ ಸಂಸ್ಕಾರವು ಪೂರ್ವ ದೆಹಲಿಯ ನಿಗಮಬೋದಲ್ಲಿ ಭಾನುವಾರ ನೆರವೇರಿತು. ರಾಹುಲ್ ಅವರಲ್ಲದೇ, ದೆಹಲಿ ಬಿಜೆಪಿ ಘಟಕದ ಅಧ್ಯಕ್ಷ ಸತೀಶ್ ಉಪಾಧ್ಯಾಯ, ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ, ದೆಹಲಿ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಜಯ್ ಮಾಕನ್‌ ಹಾಗೂ ಕಾಂಗ್ರೆಸ್‌ ಮುಖಂಡರಾದ ದಿಗ್ವಿಜಯ್ ಸಿಂಗ್, ರಣದೀಪ್‌ ಸುರ್ಜೇವಾಲಾ ಅವರೂ ಅಂತ್ಯ ಸಂಸ್ಕಾರ ಭಾಗವಹಿಸಿದ್ದರು.

ಅಕ್ಷಯ್ ಸಿಂಗ್ ಅವರು ವ್ಯಾಪಂ ಹಗರಣದಲ್ಲಿ ಹೆಸರು ಕೇಳಿಬಂದ ಬಳಿಕ ಸಾವನ್ನಪ್ಪಿದ ಯುವತಿಯ ಪೋಷಕರ ಸಂದರ್ಶನ ನಡೆಸಿದ ಬಳಿಕ ಸಾವನ್ನಪ್ಪಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT