ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ 
ದೇಶ

ಬಿಜೆಪಿಗಿಂತ ದೊಡ್ಡ ಜಾತಿವಾದಿ, ಕೋಮುವಾದಿ ಮತ್ತೊಂದಿಲ್ಲ: ನಿತೀಶ್ ಕುಮಾರ್

ದೇಶದಲ್ಲಿ ಬಿಜೆಪಿಗಿಂತ ದೊಡ್ಡ ಜಾತಿವಾದಿ ಹಾಗೂ ಕೊಮುವಾದಿ ಮತ್ತೊಂದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ...

ಪಾಟ್ನ: ದೇಶದಲ್ಲಿ ಬಿಜೆಪಿಗಿಂತ ದೊಡ್ಡ ಜಾತಿವಾದಿ ಹಾಗೂ ಕೊಮುವಾದಿ ಮತ್ತೊಂದಿಲ್ಲ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರು ಸೋಮವಾರ ಹೇಳಿದ್ದಾರೆ.

ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಎನ್ ಡಿಎ ಸರ್ಕಾರ ಜಾತಿ ಆಧಾರಿತ ಜನಗಣತಿ ನಡೆಸುತ್ತಿದೆ. ಆದರೆ, ಈ ಕುರಿತ ಫಲಿತಾಂಶವನ್ನು ಸಾರ್ವಜನಿಕರಿಗೆ ತಿಳಿಸುತ್ತಿಲ್ಲ.  ಜಾತಿ ಆಧಾರಿತ ಜನಗಣತಿ ಫಲಿತಾಂಶವನ್ನು ಸರ್ಕಾರ ಜನರಿಂದ ಮುಚ್ಚಿಡುತ್ತಿದೆ ಎಂದು ಹೇಳಿದ್ದಾರೆ.

ವೋಟ್ ಬ್ಯಾಂಕ್ ಕುರಿತಂತೆ ಮಾತನಾಡುವ ಪಕ್ಷವೇ ಇಂದು ಜಾತಿವಾದ ಹಾಗೂ ಕೋಮುವಾದಗಳನ್ನು ಮಂಡಿಸುತ್ತಿದೆ. ಬಿಜೆಪಿಗಿಂತ ದೊಡ್ಡ ಜಾತಿವಾದಿ ಹಾಗೂ ಕೋಮುವಾದಿ ಮತ್ತೊಂದಿಲ್ಲ. ಜಾತಿ ಆಧಾರಿತ ಜನಗಣತಿ ಮಾಡುವ ಸರ್ಕಾರ ಅದರಿಂದ ಬಂದ ಫಲಿತಾಂಶವನ್ನು ಜನರಿಗೆ ತಿಳಿಸಬೇಕು. ಸರ್ಕಾರದ ಈ ವರ್ತನೆಯಿಂದಲೇ ತಿಳಿಯಬಹುದು ಜಾತಿ ಆಧಾರಿತ ಜನಗಣತಿ ಯಾವ ಕಾರಣಕ್ಕೆ ಮಾಡಿದ್ದಾರೆ ಎಂಬುದನ್ನು ಎಂದು ನಿತೀಶ್ ಕುಮಾರ್ ಮೋದಿ ವಿರುದ್ಧ ಟೀಕೆ ವ್ಯಕ್ತಪಡಿಸಿದ್ದಾರೆ.

ಈ ಹಿಂದೆಯೂ ರಾಷ್ಟ್ರೀಯ ಜನತಾ ದಳದ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಸಹ ಜಾತಿ ಆಧಾರಿತ ಜನಗಣತಿ ಕುರಿತಂತೆ ಮೋದಿ ವಿರುದ್ಧ ಕಿಡಿಕಾರಿದ್ದರು. ಜಾತಿ ಜನಗಣತಿ ಫಲಿತಾಂಶವನ್ನು ಸಾರ್ವಜನಿಕರಿಗೆ ತಿಳಿಸಬೇಕಾದದ್ದು ಸರ್ಕಾರದ ಕರ್ತವ್ಯ. ಮಾಹಿತಿ ಕೇಳುವ ಹಾಗೂ ತಿಳಿದುಕೊಳ್ಳುವ ಹಕ್ಕು ಸಾರ್ವಜನಿಕರಿಗಿದೆ ಎಂದು ಹೇಳಿದ್ದರು.

ಜಾತಿ ಆಧಾರಿತ ಜನಗಣತಿ ಇದೀಗ ಕೇಂದ್ರದಲ್ಲಿ ಪ್ರತಿಪಕ್ಷಗಳ ಹಗ್ಗಜಗ್ಗಾಟಕ್ಕೆ ಕಾರಣವಾಗಿದ್ದು, ಪ್ರತಿಪಕ್ಷಗಳು ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ಕಿಡಿಕಾರುತ್ತಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT