ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ (ಸಾಂದರ್ಭಿಕ ಚಿತ್ರ) 
ದೇಶ

ಹಿಂಸಾಚಾರಕ್ಕೆ ತಿರುಗಿದ ವಿದ್ಯಾರ್ಥಿಗಳ ಪ್ರತಿಭಟನೆ

ಶಾಲಾ-ಕಾಲೇಜುಗಳ ಪಠ್ಯಪುಸ್ತಕ ಮುದ್ರಣ ತಡ ವಿರೋಧಿ ಕೇರಳದಲ್ಲಿ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದ್ದು ಪೊಲೀಸರು ಮತ್ತು ವಿದ್ಯಾರ್ಥಿಗಳ ಮಧ್ಯೆ ಸೋಮವಾರ ಘರ್ಷಣೆ ಏರ್ಪಟ್ಟಿದೆ...

ತಿರುವನಂತಪುರ: ಶಾಲಾ-ಕಾಲೇಜುಗಳ ಪಠ್ಯಪುಸ್ತಕ ಮುದ್ರಣ ತಡ ವಿರೋಧಿ ಕೇರಳದಲ್ಲಿ ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ ನಡೆಸಿದ ಪ್ರತಿಭಟನೆ ಇದೀಗ ಹಿಂಸಾಚಾರಕ್ಕೆ ತಿರುಗಿದ್ದು ಪೊಲೀಸರು ಮತ್ತು ವಿದ್ಯಾರ್ಥಿಗಳ ಮಧ್ಯೆ ಸೋಮವಾರ ಘರ್ಷಣೆ ಏರ್ಪಟ್ಟಿದೆ.

ಕೇರಳದಲ್ಲಿ ಶಾಲಾ-ಕಾಲೇಜುಗಳು ಪ್ರಾರಂಭವಾಗಿ ಹಲವು ದಿನಗಳು ಕಳೆದು ಈವರೆಗೂ ಪಠ್ಯಪುಸ್ತಕಗಳು ಮುದ್ರಣವಾಗಿಲ್ಲ. ಶಿಕ್ಷಣ ಇಲಾಖೆಯ ಈ ಕ್ರಮಕ್ಕೆ ತೀವ್ರ ರೀತಿಯಲ್ಲಿ ಕೆಂಡಾಮಂಡಲವಾಗಿರುವ ವಿದ್ಯಾರ್ಥಿಗಳ ಸಂಘಟನೆಗಳು ಇದೀಗ ಶಿಕ್ಷಣ ಇಲಾಖೆಯ ವಿರುದ್ಧ ತಿರುಗಿ ಬಿದ್ದಿದ್ದು, ಶಿಕ್ಷಣ ಇಲಾಖೆಯ ವಿರುದ್ಧ ಚಂದ್ರಶೇಖರನ್ ನಾಯರ್ ಸ್ಟೇಡಿಯಂ, ಕೋಝಿಕೋಡ್ ಹಾಗೂ ಇನ್ನಿತರೆ ಸ್ಥಳಗಳಲ್ಲಿ ಕೇರಳದಾದ್ಯಂತ ಪ್ರತಿಭಟನೆ ನಡೆಸಿದೆ.

ಪ್ರತಿಭಟನೆ ವೇಳೆ ಪೊಲೀಸರು ವಿದ್ಯಾರ್ಥಿಗಳಿಗೆ ತಡೆಯೊಡ್ಡಿದ್ದಾರೆ. ಈ ವೇಳೆ ವಿದ್ಯಾರ್ಥಿಗಳು ಕೆಂಡಾಮಂಡಲವಾಗಿದ್ದು, ಪೊಲೀಸರ ವಿರುದ್ಧ ತಿರುಗಿಬಿದ್ದಿದ್ದಾರೆ. ನಂತರ ಪ್ರತಿಭಟನೆ ಹಿಂತಾಚಾರಕ್ಕೆ ತಿರುಗಿದ್ದು, ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ನಿಯಂತ್ರಿಸುವ ಸಲುವಾಗಿ ಪೊಲೀಸರು ಲಾಟಿ ಚಾರ್ಜ್ ಹಾಗೂ ಜಲ ಫಿರಂಗಿ ಪ್ರಯೋಗ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT