ಶಿವರಾಜ್ ಸಿಂಗ್ ಚೌಹಾಣ್ 
ದೇಶ

ಜನರ ಒತ್ತಡಕ್ಕೆ ಮಣಿದ ಮಧ್ಯಪ್ರದೇಶ ಸಿಎಂ, ವ್ಯಾಪಂ ಹಗರಣ ಸಿಬಿಐಗೆ ಶಿಫಾರಸು

ಕಡೆಗೂ ಜನರ ಒತ್ತಡಕ್ಕೆ ಮಣಿದಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ...

ಭೋಪಾಲ್: ಕಡೆಗೂ ಜನರ ಒತ್ತಡಕ್ಕೆ ಮಣಿದಿರುವ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು, ದೇಶಾದ್ಯಂತ ತೀವ್ರ ಚರ್ಚೆಗೆ ಕಾರಣವಾಗಿರುವ ವ್ಯಾಪಂ ಹಗರಣವನ್ನು ಸಿಬಿಐಗೆ ಶಿಫಾರಸು ಮಾಡಿದ್ದಾರೆ.

ಈ ಸಂಬಂಧ ಇಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಚೌಹಾಣ್, ಕೋರ್ಟ್ ನಿರ್ದೇಶಿತ ಸಿಬಿಐ ತನಿಖೆಗೆ ತಾವು ಸಿದ್ಧರಿದ್ದು, ಮಧ್ಯಪ್ರದೇಶ ಹೈಕೋರ್ಟ್ ಸಿಬಿಐ ತನಿಖೆಗೆ ಆದೇಶ ನೀಡಲಿ ಎಂದಿದ್ದಾರೆ. ಅಲ್ಲದೆ ಈ ಸಂಬಂಧ ಹೈಕೋರ್ಟ್‌ಗೆ ಮನವಿ ಸಲ್ಲಿಸುವುದಾಗಿ ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರವನ್ನು ಸಮರ್ಥಿಸಿಕೊಂಡ ಶಿವರಾಜ್ ಸಿಂಗ್ ಚೌಹಾಣ್, ರಾಜ್ಯದ ಜನತೆಯ ಒತ್ತಾಸೆಗೆ ಮಣಿದು ಹಗರಣವನ್ನು ಸಿಬಿಐಗೆ ವಹಿಸುತ್ತಿರುವುದಾಗಿ ಹೇಳಿದ್ದಾರೆ.

ಸಿಬಿಐ ತನಿಖೆಗೆ ಹೈಕೋರ್ಟ್ ಸಹ ಒಪ್ಪಿಗೆ ಸೂಚಿಸಿಲ್ಲ. ಆದರೂ ಜನರ ಭಾವನೆಗಳಿಗೆ ಮನ್ನಣೆ ನೀಡುತ್ತಿದ್ದೇನೆ ಎಂದಿದ್ದಾರೆ.

ವ್ಯಾಪಂ ಹಗರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕಾಂಗ್ರೆಸ್ ಪಕ್ಷ ಸೇರಿದಂತೆ ಇತರೆ ಪಕ್ಷಗಳು ಒತ್ತಡ ಹೇರಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತೀಯ ನೌಕಾಪಡೆ ಅತಿಥಿ 'ಐರಿಸ್ ದೇನಾ' ಯುದ್ಧನೌಕೆಯನ್ನು ಅಮೆರಿಕ ಹೊಡೆದುರುಳಿಸಿದೆ: ಇರಾನ್

'ಇದು ನನ್ನ ಮನದ ಆಸೆ': ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

ವಿಧಾನಸಭೆ ಚುನಾವಣೆಗೂ ಮುನ್ನ ಅಸ್ಸಾಂನ ಮೂವರು ಕಾಂಗ್ರೆಸ್ ಶಾಸಕರು ಆಡಳಿತಾರೂಢ ಬಿಜೆಪಿ ಸೇರ್ಪಡೆ

ರಾಂಚಿಯಲ್ಲಿ ಅತಿ ವೇಗವಾಗಿ ಕಾರು ಚಾಲನೆ: ಟೀಂ ಇಂಡಿಯಾ ಮಾಜಿ ನಾಯಕ ಎಂಎಸ್ ಧೋನಿಗೆ ದಂಡ!

ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸ್ಟಾರ್ ಕ್ರಿಕೆಟಿಗ, ಕನ್ನಡಿಗ Vaishak Vijayakumar, ಹುಡುಗಿ ಯಾರು ಗೊತ್ತಾ? Video

SCROLL FOR NEXT