ಅರವಿಂದ್ ಕೇಜ್ರಿವಾಲ್(ಸಂಗ್ರಹ ಚಿತ್ರ) 
ದೇಶ

ಮೃತ ಪತ್ರಕರ್ತನ ಸಹೋದರಿಗೆ ಸರ್ಕಾರಿ ಉದ್ಯೋಗ; ಕೇಜ್ರಿವಾಲ್‌ ಭರವಸೆ

ವ್ಯಾಪಂ ಹಗರಣ ಸಂಬಂಧ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ನರ್ಮತಾ ದಾಮೋರ್ ಅವರು ಪೋಷಕರ ಸಂದರ್ಶನ ಮಾಡಿ ಅಸಹಜವಾಗಿ ಸಾವನ್ನಪ್ಪಿರುವ ಟಿವಿ...

ನವದೆಹಲಿ: ವ್ಯಾಪಂ ಹಗರಣ ಸಂಬಂಧ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದ ನರ್ಮತಾ ದಾಮೋರ್ ಅವರು ಪೋಷಕರ ಸಂದರ್ಶನ ಮಾಡಿ ಅಸಹಜವಾಗಿ ಸಾವನ್ನಪ್ಪಿರುವ ಟಿವಿ ಪತ್ರಕರ್ತ ಅಕ್ಷಯ್ ಸಿಂಗ್ ಅವರ ಸಹೋದರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸರ್ಕಾರಿ ಉದ್ಯೋಗ ನೀಡುವ ಭರವಸೆ ನೀಡಿದ್ದಾರೆ.

ಮೃತ ಟಿವಿ ಪತ್ರಕರ್ತ ಅಕ್ಷಯ್‌ ಸಿಂಗ್‌ನ ಮನೆಗೆ ಭೇಟಿ ನೀಡಿ ಸುಮಾರು ಒಂದು ಗಂಟೆ ಕಾಲ ಇದ್ದು ಆತನ ಕುಟುಂಬದವರಿಗೆ ಸಾಂತ್ವನ ಹೇಳಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ಉಪ ಮುಖ್ಯಮಂತ್ರಿ ಮನೀಷ್‌ ಸಿಸೋಡಿಯ ಅಕ್ಷಯ್‌ ಸಿಂಗ್‌ನ ಸಹೋದರಿಗೆ ಸರ್ಕಾರಿ ಉದ್ಯೋಗದ ನೀಡುವ ಆಶ್ವಾಸನೆ ನೀಡಿದ್ದಾರೆ.

ಇದೇ ವೇಳೆ ಅರವಿಂದ್ ಕೇಜ್ರಿವಾಲ್ ಅವರು, ಅಕ್ಷಯ್‌ ಸಿಂಗ್‌ನ ಸಾವಿನ ಬಗ್ಗೆ ಸ್ವತಂತ್ರ ತನಿಖೆಗೆ ಒತ್ತಾಯಿಸಿದ್ದು, ಆತನ ಕುಟುಂಬಕ್ಕೆ ಪೂರ್ಣ ಪ್ರಮಾಣದ ಆರ್ಥಿಕ ನೆರವನ್ನು ನೀಡಲಾಗುವು ಎಂದು ಹೇಳಿದ್ದಾರೆ.

ಮನೆಗೆ ಹಿರಿಯ ಮಗನಾಗಿದ್ದ ಅಕ್ಷಯ್‌ ಸಿಂಗ್‌ ಕುಟುಂಬದ ಆಧಾರ ಸ್ತಂಭವಾಗಿದ್ದ. ಆತನ ಸಾವಿನಿಂದ ಆತನ ಕುಟುಂಬ ಧೃತಿಗೆಟ್ಟಿದೆ. ಆತನ ಸಹೋದರಿಗೆ ನಾವು ಉದ್ಯೋಗದ ಭರವಸೆ ನೀಡಿದ್ದೇವೆ ಎಂದು ಸಿಸೋಡಿಯ ಅವರು ಮಾಧ್ಯಮಕ್ಕೆ ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮೈಸೂರಿನಲ್ಲಿ ರಾಹುಲ್ ಗಾಂಧಿ ಜತೆ ಸಿದ್ದರಾಮಯ್ಯ, ಡಿಕೆಸಿ ಮಹತ್ವದ ಚರ್ಚೆ; ಬಳಿಕ ಸಿಎಂ ಹೇಳಿದ್ದೇನು? Video

'Ground Ops ಗಾಗಿ ಭಾರತೀಯ ಸೇನೆ ಸಂಪೂರ್ಣ ಸಜ್ಜು: ಪಾಕ್ ಗೆ ವಾರ್ನಿಂಗ್ ನೀಡಿದ ಸೇನಾ ಮುಖ್ಯಸ್ಥ ದ್ವಿವೇದಿ!

ಬ್ಲಿಂಕಿಟ್, ಸ್ವಿಗ್ಗಿ, ಜೆಪ್ಟೊಗೆ 10 ನಿಮಿಷಗಳ ಡೆಲಿವರಿ ಸೇವೆ ನಿಲ್ಲಿಸುವಂತೆ ಸರ್ಕಾರ ಸೂಚನೆ; ಯಾಕೆ ಗೊತ್ತಾ?

'ಹಾವು ಕಚ್ಚಿದೆ ಬೇಗ ಚಿಕಿತ್ಸೆ ಕೊಡಿ'; ಜೀವಂತ ನಾಗರಹಾವನ್ನೇ ಜೇಬಿನಲ್ಲಿಟ್ಟು ಆಸ್ಪತ್ರೆಗೆ ಬಂದ ಆಟೋ ಚಾಲಕ, Video

ಜಮ್ಮು-ಕಾಶ್ಮೀರ: ಇದೇ ಮೊದಲು, ಮಸೀದಿಯ ಇಮಾಮ್ ಸೇರಿದಂತೆ ಎಲ್ಲರ ವೈಯಕ್ತಿಕ ಮಾಹಿತಿ ಕಲೆ ಹಾಕುತ್ತಿರುವ ಪೊಲೀಸರು! ಕಾರಣವೇನು ಗೊತ್ತಾ?

SCROLL FOR NEXT