ವಸುಂಧರಾ ರಾಜೇ - ಲಲಿತ್ ಮೋದಿ 
ದೇಶ

ಪದ್ಮ ಪ್ರಶಸ್ತಿಗೆ ಲಲಿತ್ ಮೋದಿ ಹೆಸರು ಶಿಫಾರಸು ಮಾಡಿದ್ದ ವಸುಂಧರಾ ರಾಜೇ

ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ವಸುಂಧರಾ ರಾಜೇ ಅವರು ಐಪಿಎಲ್ ಹಗರಣದ...

ನವದೆಹಲಿ: ರಾಜಸ್ಥಾನ ಮುಖ್ಯಮಂತ್ರಿ ವಸುಂಧರಾ ರಾಜೇ ಅವರು ಮತ್ತಷ್ಟು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆ ಇದೆ. ವಸುಂಧರಾ ರಾಜೇ ಅವರು ಐಪಿಎಲ್ ಹಗರಣದ ಆರೋಪಿ ಲಲಿತ್ ಮೋದಿ ಅವರ ಹೆಸರನ್ನು ಪದ್ಮ ಪ್ರಶಸ್ತಿಗೆ ಶಿಫಾರಸು ಮಾಡಿದ್ದರು ಎಂದು ಬುಧವಾರ ಮಾಧ್ಯಮಗಳು ವರದಿ ಮಾಡಿವೆ.

ವರದಿಗಳ ಪ್ರಕಾರ, ರಾಜೇ ಅವರು ಜುಲೈ 28, 2007ರಲ್ಲಿ ದೇಶದ ಪ್ರತಿಷ್ಠಿತ ಪದ್ಮ ಪ್ರಶಸ್ತಿಗೆ ಐಪಿಎಲ್ ಮಾಜಿ ಮುಖ್ಯಸ್ಥ ಲಲಿತ್ ಮೋದಿ ಅವರ ಹೆಸರು ಶಿಫಾರಸು ಮಾಡಿದ್ದರು.

ರಾಜ್ಯದಲ್ಲಿ ಕ್ರಿಕೆಟ್ ಅಭಿವೃದ್ಧಿಗೆ ಹಾಗೂ ಉದ್ಯಮಕ್ಕೆ ನೀಡಿದ ಕೊಡುಗೆಗಾಗಿ ಲಲಿತ್ ಮೋದಿಗೆ ಪದ್ಮ ಪ್ರಶಸ್ತಿ ನೀಡುವಂತೆ ರಾಜಸ್ಥಾನ ಸರ್ಕಾರ ಕೇಂದ್ರಕ್ಕೆ ಶಿಫಾರಸು ಮಾಡಿತ್ತು ಎಂದು ವರದಿ ಮಾಡಲಾಗಿದೆ.

ರಾಜಸ್ಥಾನ ಸಿಎಂ ಈಗಾಗಲೇ ಲಲಿತ್ ಮೋದಿ ಅವರೊಂದಿಗೆ ವ್ಯವಹಾರಿಕ ಸಂಬಂಧ ಹೊಂದಿದ ಆರೋಪ ಎದುರಿಸುತ್ತಿದ್ದು, ಈ ವರದಿಯಿಂದಾಗಿ ರಾಜೇ ರಾಜಿನಾಮೆಯ ಒತ್ತಡ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!