ವ್ಯಾಪಂ ಹಗರಣ ವಿರೋಧಿಸಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ರಾಜಿನಾಮೆ ನೀಡುವಂತೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮಂಗಳವಾರ ಪ್ರತಿಭಟನೆ ನಡೆಸಿದ ಚಿತ್ರ 
ದೇಶ

ವ್ಯಾಪಂ ಹಗರಣ: ನಮ್ರತಾ ದಾಮೋರ್ ಕೇಸ್ ರೀ ಓಪನ್ ಮಾಡುವಂತೆ ಸೂಚನೆ

ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ 2012 ರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಎಂಬಿಬಿಎಸ್ ವಿದ್ಯಾರ್ಥಿನಿಯ ಪ್ರಕರಣವನ್ನು ರೀ ಓಪನ್ ಮಾಡುವಂತೆ ಅಧಿಕಾರಿಗಳು ಪೊಲೀಸರಿಗೆ ಬುಧವಾರ ಸೂಚನೆ ನೀಡಿದ್ದಾರೆ...

ಉಜ್ಜಯಿನಿ: ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ 2012 ರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಎಂಬಿಬಿಎಸ್ ವಿದ್ಯಾರ್ಥಿನಿಯ ಪ್ರಕರಣವನ್ನು ರೀ ಓಪನ್ ಮಾಡುವಂತೆ ಅಧಿಕಾರಿಗಳು ಪೊಲೀಸರಿಗೆ ಬುಧವಾರ ಸೂಚನೆ ನೀಡಿದ್ದಾರೆ.

ವ್ಯಾಪಂ ಹಗರಣ ಪ್ರಕರಣವು ದೇಶದಾದ್ಯಂತ ಸುದ್ದಿ ಮಾಡುತ್ತಿದ್ದು, ಪ್ರಕರಣ ಸಂಬಂಧ ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.  ವ್ಯಾಪಂ ಹಗರಣದಲ್ಲಿ ಭಾಗಿಯಾಗಿ ನಮ್ರತಾ ದಾಮೋರ್ ಎಂಬ ವಿದ್ಯಾರ್ಥಿನಿ 2009 ರಲ್ಲಿ ಮೆಡಿಕಲ್ ಸೀಟ್ ಪಡೆದುಕೊಂಡಿದ್ದಳು ಎಂದು ಹೇಳಲಾಗುತ್ತಿತ್ತು. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದ್ಯಾರ್ಥಿಯ ಶವ 2012 ರಲ್ಲಿ ಉಜ್ಜಯನಿಯ ರೈಲ್ವೆ ಟ್ರ್ಯಾಕ್ ಬಳಿ ಸಿಕ್ಕಿತ್ತು. ವ್ಯಾಪಂ ಹಗರಣದ ಸುತ್ತ ಹಲವು ಅನುಮಾನಗಳು ಸುತ್ತಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಸಾವನ್ನಪ್ಪಿದ್ದ ವಿದ್ಯಾರ್ಥಿನಿಯ ಪೋಷಕರನ್ನು ಸಂದರ್ಶನ ಮಾಡಲು ಪತ್ರಕರ್ತ ಅಕ್ಷಯ್ ಸಿಂಗ್ ಎಂಬುವವರು ಹೋಗಿದ್ದರು. ಆದರೆ ವರದಿ ವೇಳೆಯಲ್ಲಿ ಅವರು ಸಹ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.

ಹೀಗಾಗಿ ಪ್ರಕರಣ ಸಂಬಂಧ ದೇಶದಾದ್ಯಂತ ಹಲವು ಅನುಮಾನ ಹಾಗೂ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ತನಿಖಾ ತಂಡವು ನಮ್ರತಾ ದಾಮೋರ್ ಅವರ ಸಾವು ಪ್ರಕರಣದ ತನಿಖೆಯನ್ನು ಪುನರಾರಂಭಿಸಲು ಹಿರಿಯ ಅಧಿಕಾರಿಗಳು ಉಜ್ಜಯಿನಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT