ವ್ಯಾಪಂ ಹಗರಣ ವಿರೋಧಿಸಿ ಮುಖ್ಯಮಂತ್ರಿ ಶಿವರಾಜ್ ಸಿಂಗ್ ರಾಜಿನಾಮೆ ನೀಡುವಂತೆ ಯುವ ಕಾಂಗ್ರೆಸ್ ಕಾರ್ಯಕರ್ತರ ಮಂಗಳವಾರ ಪ್ರತಿಭಟನೆ ನಡೆಸಿದ ಚಿತ್ರ 
ದೇಶ

ವ್ಯಾಪಂ ಹಗರಣ: ನಮ್ರತಾ ದಾಮೋರ್ ಕೇಸ್ ರೀ ಓಪನ್ ಮಾಡುವಂತೆ ಸೂಚನೆ

ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ 2012 ರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಎಂಬಿಬಿಎಸ್ ವಿದ್ಯಾರ್ಥಿನಿಯ ಪ್ರಕರಣವನ್ನು ರೀ ಓಪನ್ ಮಾಡುವಂತೆ ಅಧಿಕಾರಿಗಳು ಪೊಲೀಸರಿಗೆ ಬುಧವಾರ ಸೂಚನೆ ನೀಡಿದ್ದಾರೆ...

ಉಜ್ಜಯಿನಿ: ವ್ಯಾಪಂ ಹಗರಣಕ್ಕೆ ಸಂಬಂಧಿಸಿದಂತೆ 2012 ರಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಎಂಬಿಬಿಎಸ್ ವಿದ್ಯಾರ್ಥಿನಿಯ ಪ್ರಕರಣವನ್ನು ರೀ ಓಪನ್ ಮಾಡುವಂತೆ ಅಧಿಕಾರಿಗಳು ಪೊಲೀಸರಿಗೆ ಬುಧವಾರ ಸೂಚನೆ ನೀಡಿದ್ದಾರೆ.

ವ್ಯಾಪಂ ಹಗರಣ ಪ್ರಕರಣವು ದೇಶದಾದ್ಯಂತ ಸುದ್ದಿ ಮಾಡುತ್ತಿದ್ದು, ಪ್ರಕರಣ ಸಂಬಂಧ ಹಲವು ಅನುಮಾನಗಳಿಗೆ ದಾರಿಮಾಡಿಕೊಟ್ಟಿದೆ.  ವ್ಯಾಪಂ ಹಗರಣದಲ್ಲಿ ಭಾಗಿಯಾಗಿ ನಮ್ರತಾ ದಾಮೋರ್ ಎಂಬ ವಿದ್ಯಾರ್ಥಿನಿ 2009 ರಲ್ಲಿ ಮೆಡಿಕಲ್ ಸೀಟ್ ಪಡೆದುಕೊಂಡಿದ್ದಳು ಎಂದು ಹೇಳಲಾಗುತ್ತಿತ್ತು. ಈ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ವಿದ್ಯಾರ್ಥಿಯ ಶವ 2012 ರಲ್ಲಿ ಉಜ್ಜಯನಿಯ ರೈಲ್ವೆ ಟ್ರ್ಯಾಕ್ ಬಳಿ ಸಿಕ್ಕಿತ್ತು. ವ್ಯಾಪಂ ಹಗರಣದ ಸುತ್ತ ಹಲವು ಅನುಮಾನಗಳು ಸುತ್ತಿಕೊಂಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ಸಂಬಂಧ ಸಾವನ್ನಪ್ಪಿದ್ದ ವಿದ್ಯಾರ್ಥಿನಿಯ ಪೋಷಕರನ್ನು ಸಂದರ್ಶನ ಮಾಡಲು ಪತ್ರಕರ್ತ ಅಕ್ಷಯ್ ಸಿಂಗ್ ಎಂಬುವವರು ಹೋಗಿದ್ದರು. ಆದರೆ ವರದಿ ವೇಳೆಯಲ್ಲಿ ಅವರು ಸಹ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು.

ಹೀಗಾಗಿ ಪ್ರಕರಣ ಸಂಬಂಧ ದೇಶದಾದ್ಯಂತ ಹಲವು ಅನುಮಾನ ಹಾಗೂ ವ್ಯಾಪಕ ಟೀಕೆ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿರುವ ತನಿಖಾ ತಂಡವು ನಮ್ರತಾ ದಾಮೋರ್ ಅವರ ಸಾವು ಪ್ರಕರಣದ ತನಿಖೆಯನ್ನು ಪುನರಾರಂಭಿಸಲು ಹಿರಿಯ ಅಧಿಕಾರಿಗಳು ಉಜ್ಜಯಿನಿ ಪೊಲೀಸರಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT