ಬಬೂಲ್ ಸುಪ್ರಿಯೋ 
ದೇಶ

ಹೇಮಮಾಲಿನಿಯಿಂದ ಘೋರ ಅಪರಾಧವಾಗಿದೆ: ಬಬೂಲ್ ಸುಪ್ರಿಯೋ

ನಟಿ ಹಾಗೂ ಬಿಜೆಪಿ ಸಂಸದೆ ಹೇಮಮಾಲಿನಿ ಕಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ಬಾಲಕಿ ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ...

ನವದೆಹಲಿ: ನಟಿ ಹಾಗೂ ಬಿಜೆಪಿ ಸಂಸದೆ ಹೇಮಮಾಲಿನಿ ಕಾರಿಗೆ ಅಲ್ಟೋ ಕಾರು ಡಿಕ್ಕಿಯಾಗಿ ಬಾಲಕಿ ಮೃತ ಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಕೇಂದ್ರ ಬಿಜೆಪಿ ಸಚಿವರೊಬ್ಬರು ತಮ್ಮದೇ ಪಕ್ಷದ ಸಂಸದೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹೇಮ ಮಾಲಿನಿಯಿಂದ ಗಂಭೀರವಾದ ಅಪರಾಧವಾಗಿದೆ ಎಂದು ಸಚಿವ ಬಬೂಲ್ ಸುಪ್ರಿಯೋ ಟೀಕಿಸಿದ್ದಾರೆ. ಬಾಲಕಿಯ ತಂದೆ ಟ್ರಾಫಿಕ್ ನಿಯಮ ಪಾಲಿಸಿದ್ದರೆ ಆಕೆ ಸಾಯುತ್ತಿರಲಿಲ್ಲ ಎಂದು ಹೇಮಮಾಲಿನಿ ಮಾಡಿದ್ದ ಟ್ವೀಟ್ ಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ ಸುಪ್ರಿಯೋ ಅಪಘಾತವಾದ ಸಂದರ್ಭದಲ್ಲಿ ಮಗುವನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಬೇಕಿತ್ತು. ಆದರೆ ಹೇಮ ಮಾಲಿನಿ ಆ ಕೆಲಸ ಮಾಡಿಲ್ಲ. ಇದು ಅವರಿಂದಾದ ಬಹು ದೊಡ್ಡ ತಪ್ಪು, ಈ ಸತ್ಯವನ್ನು ಅವರು ಒಪ್ಪಿಕೊಳ್ಳಬೇಕು ಎಂದು ಸುಪ್ರಿಯೋ ಕಿಡಿಕಾರಿದ್ದಾರೆ.

ಹೇಮಾ ಮಾಲಿನ ಮಾಡಿದ್ದ ಟ್ವೀಟ್ ಗೆ ಮೃತ ಬಾಲಕಿಯ ತಂದೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದರು. ಅಪಘಾತವಾದ ಸಂದರ್ಭದಲ್ಲಿ ತನ್ನ ಮಗಳನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿದ್ದರೆ ಬದುಕುಳಿಯುತ್ತಿದ್ಧಳು ಎಂದು ಮಾಧ್ಯಮಗಳ ಮುಂದೆ ತಮ್ಮ ಅಳಲು ತೋಡಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT