ಲಾಲ್ ಬಹದ್ದೂರ್ ಶಾಸ್ತ್ರಿ 
ದೇಶ

ಮಾಜಿ ಪ್ರಧಾನಿ ಶಾಸ್ತ್ರಿ ಅವರ ಸಾವಿನ ದಾಖಲೆ ಬಹಿರಂಗಪಡಿಸಿ: ಸುನೀಲ್ ಶಾಸ್ತ್ರಿ

ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಸಾವಿನ ಕುರಿತ ದಾಖಲೆಗಳನ್ನು ಬಹಿರಂಗಪಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಶಾಸ್ತ್ರಿ ಅವರ ಪುತ್ರ...

ನವದೆಹಲಿ: ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಸಾವಿನ ಕುರಿತ ದಾಖಲೆಗಳನ್ನು ಬಹಿರಂಗಪಡಿಸಿ ಎಂದು ಪ್ರಧಾನಿ ನರೇಂದ್ರ ಮೋದಿಗೆ ಶಾಸ್ತ್ರಿ ಅವರ ಪುತ್ರ ಬಿಜೆಪಿ ಮುಖಂಡ ಸುನೀಲ್ ಶಾಸ್ತ್ರಿ ಮನವಿ ಮಾಡಿದ್ದಾರೆ.

ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಅಚಾನಕ್  ಸಾವು ಕುರಿತಂತೆ ಹಲವು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ. ಹೀಗಾಗಿ ಅವರ ಸಾವಿನ ಕುರಿತಂತೆ ಸಂಪೂರ್ಣ ದಾಖಲೆಗಳನ್ನು ಬಹಿರಂಗಪಡಿಸಿ ಅನುಮಾನಗಳಿಗೆ ತೆರೆ ಎಳೆಯಬೇಕು. ಈ ಹಿಂದೆಯೂ ಸಹ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ದಾಖಲೆ ಬಹಿರಂಗಪಡಿಸುವಂತೆ ಮನವಿ ಮಾಡಿದ್ದೆ ಆದರೆ ಅದು ಸಾಧ್ಯವಾಗಿಲ್ಲ. ಇಗಲಾದರು ವರದಿಯನ್ನು ಬಹಿರಂಗಪಡಿಸಿ ದೇಶದ ಜನತೆಗೆ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರ ಸಾವಿನ ಕುರಿತಂತೆ ಸತ್ಯ ತಿಳಿಯಲಿ ಎಂದು ಸುನೀಲ್ ಶಾಸ್ತ್ರಿ ಪ್ರಧಾನಿಗೆ ಮನವಿ ಮಾಡಿದ್ದಾರೆ.

'ಭಾರತ- ಪಾಕಿಸ್ಥಾನ(1965) ಯುದ್ಧದ ನಂತರ ನನ್ನ ತಂದೆ ಲಾಲ್ ಬಹಾದ್ದೂರ್ ಶಾಸ್ತ್ರಿ ಅವರು ತಾಷ್ಕಂಟ್ ಒಪ್ಪಂದಕ್ಕೆ ಸಹಿ ಮಾಡಲು ಪಾಕಿಸ್ತಾನಕ್ಕೆ ಹೊರಟಾಗ ಸಂಪೂರ್ಣವಾಗಿ ಸ್ವಸ್ಥರಾಗಿದ್ದರು. ಅವರ ಆರೋಗ್ಯದಲ್ಲಿ ಯಾವುದೇ ರೀತಿಯ ಏರುಪೇರಾಗಿರಲಿಲ್ಲ. ಆದರೆ 1966, ಜನವರಿ 11ರ ರಾತ್ರಿ ಅವರು ಅಚಾನಕ್ ಆಗಿ ಮೃತ ಪಟ್ಟಿದ್ದು ಹೇಗೆ?"  ಎಂದು ಶಾಸ್ತ್ರೀ ಪ್ರಶ್ನಿಸಿದ್ದಾರೆ.
 
ತಾಷ್ಕೆಂಟ್‌ನಲ್ಲಿ ಮಾಜಿ ಪ್ರಧಾನಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಶೃದ್ಧಾಂಜಲಿಯನ್ನು ಅರ್ಪಿಸಿದ್ದರು. ಇದೇ ಸಮಯದಲ್ಲಿ ಸುನೀಸ್ ಶಾಸ್ತ್ರಿ ನಮ್ಮ ತಂದೆಯವರ ಸಾವಿನ ಹಿಂದಿರುವ ಸತ್ಯ ಹೊರಗೆ ಬಂದರೆ ನಮ್ಮ ಮನಸ್ಸು ಹಗುರವಾಗುತ್ತದೆ. ಹೀಗಾಗಿ ತಂದೆಯ ಸಾವಿನ ರಹಸ್ಯ ಹೊರಬರಲು ಮೋದಿ ನೆರವಾಗುತ್ತಾರೆ ಎಂಬ ಆಶಾವಾದವನ್ನು ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT