ರಾಮ್ ನರೇಶ್ ಯಾದವ್ 
ದೇಶ

ಗವರ್ನರ್ ರಾಮನರೇಶ್ ಯಾದವ್ 10ನೇ ಆರೋಪಿ

ಮಧ್ಯಪ್ರದೇಶ ವೈದ್ಯಕೀಯ ಪ್ರವೇಶ, ನೇಮಕಾತಿ ಪರೀಕ್ಷೆ ಹಗರಣ (ವ್ಯಾಪಂ)ದಲ್ಲಿ ಮಧ್ಯ ಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ...

ಭೋಪಾಲ್: ಮಧ್ಯಪ್ರದೇಶ ವೈದ್ಯಕೀಯ ಪ್ರವೇಶ, ನೇಮಕಾತಿ ಪರೀಕ್ಷೆ ಹಗರಣ (ವ್ಯಾಪಂ)ದಲ್ಲಿ ಮಧ್ಯ ಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಆರೋಪಿ ನಂ.10. ಅವರ ವಿರುದ್ಧ  ಕ್ರಿಮಿ ನಲ್ ಕೇಸು ದಾಖಲಾಗಿದ್ದರೂ ರಾಜ್ಯಪಾಲರಿಗಿರುವ ಸಾಂವಿಧಾನಿಕ ರಕ್ಷಣೆಯಿಂದಾಗಿ ರಾಮ್ ನರೇಶ್ ವಿಚಾರಣೆಯಿಂದ ದೂರವುಳಿದಿದ್ದಾರೆ. ರಾಮ್ ನರೇಶ್ ರೀತಿಯಲ್ಲೇ ಆರೋಪ ಎದುರಿಸುತ್ತಿದ್ದ ಉಳಿದ ಆರೋಪಿಗಳೆಲ್ಲ ಬಂಧನಕ್ಕೊಳಗಾಗಿದ್ದಾರೆ. ಏತನ್ಮಧ್ಯೆ, ಹಗರಣದಲ್ಲಿ ಎಫ್ ಐಆರ್ ದಾಖಲಾಗಿದ್ದರೂ ಅಧಿಕಾರದಲ್ಲಿ ಮುಂದುವರಿಯುತ್ತಿರುವ ರಾಜ್ಯಪಾಲ ಯಾದವ್‍ರನ್ನು ವಜಾ ಮಾಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಈ ಅರ್ಜಿಯ ಜತೆಯಲ್ಲೇ ವ್ಯಾಪಂ ಹಗರಣವನ್ನು ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಇನ್ನೆರಡು ಅರ್ಜಿಗಳೂ ವಿಚಾರಣೆಗೆ ಬರಲಿದೆ. ಇದರ ಜತೆಯಲ್ಲೇ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಅವರು ಸುಪ್ರೀಂಗೂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT