ರಾಮ್ ನರೇಶ್ ಯಾದವ್ 
ದೇಶ

ಗವರ್ನರ್ ರಾಮನರೇಶ್ ಯಾದವ್ 10ನೇ ಆರೋಪಿ

ಮಧ್ಯಪ್ರದೇಶ ವೈದ್ಯಕೀಯ ಪ್ರವೇಶ, ನೇಮಕಾತಿ ಪರೀಕ್ಷೆ ಹಗರಣ (ವ್ಯಾಪಂ)ದಲ್ಲಿ ಮಧ್ಯ ಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ...

ಭೋಪಾಲ್: ಮಧ್ಯಪ್ರದೇಶ ವೈದ್ಯಕೀಯ ಪ್ರವೇಶ, ನೇಮಕಾತಿ ಪರೀಕ್ಷೆ ಹಗರಣ (ವ್ಯಾಪಂ)ದಲ್ಲಿ ಮಧ್ಯ ಪ್ರದೇಶ ರಾಜ್ಯಪಾಲ ರಾಮ್ ನರೇಶ್ ಯಾದವ್ ಆರೋಪಿ ನಂ.10. ಅವರ ವಿರುದ್ಧ  ಕ್ರಿಮಿ ನಲ್ ಕೇಸು ದಾಖಲಾಗಿದ್ದರೂ ರಾಜ್ಯಪಾಲರಿಗಿರುವ ಸಾಂವಿಧಾನಿಕ ರಕ್ಷಣೆಯಿಂದಾಗಿ ರಾಮ್ ನರೇಶ್ ವಿಚಾರಣೆಯಿಂದ ದೂರವುಳಿದಿದ್ದಾರೆ. ರಾಮ್ ನರೇಶ್ ರೀತಿಯಲ್ಲೇ ಆರೋಪ ಎದುರಿಸುತ್ತಿದ್ದ ಉಳಿದ ಆರೋಪಿಗಳೆಲ್ಲ ಬಂಧನಕ್ಕೊಳಗಾಗಿದ್ದಾರೆ. ಏತನ್ಮಧ್ಯೆ, ಹಗರಣದಲ್ಲಿ ಎಫ್ ಐಆರ್ ದಾಖಲಾಗಿದ್ದರೂ ಅಧಿಕಾರದಲ್ಲಿ ಮುಂದುವರಿಯುತ್ತಿರುವ ರಾಜ್ಯಪಾಲ ಯಾದವ್‍ರನ್ನು ವಜಾ ಮಾಡಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್ ಗುರುವಾರ ವಿಚಾರಣೆಗೆ ಕೈಗೆತ್ತಿಕೊಳ್ಳಲಿದೆ. ಈ ಅರ್ಜಿಯ ಜತೆಯಲ್ಲೇ ವ್ಯಾಪಂ ಹಗರಣವನ್ನು ಸುಪ್ರೀಂ ಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿ ಸಲ್ಲಿಕೆಯಾಗಿದ್ದ ಇನ್ನೆರಡು ಅರ್ಜಿಗಳೂ ವಿಚಾರಣೆಗೆ ಬರಲಿದೆ. ಇದರ ಜತೆಯಲ್ಲೇ ಹಗರಣದ ತನಿಖೆಯನ್ನು ಸಿಬಿಐಗೆ ವಹಿಸುವಂತೆ ಅವರು ಸುಪ್ರೀಂಗೂ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT