ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ 
ದೇಶ

ಗಡಿ ಸುರಕ್ಷಿತವಾಗಿಡುವ ಸಾಮರ್ಥ್ಯವಿದೆ: ಪಾಕ್ ಅಣ್ವಸ್ತ್ರ ಬೆದರಿಕೆಗೆ ಮನೋಹರ್ ಪರಿಕ್ಕರ್ ಪ್ರತಿಕ್ರಿಯೆ

ತನ್ನ ಗಡಿಯನ್ನು ಸುರಕ್ಷಿತವಾಗಿಡಲು ಭಾರತಕ್ಕೆ ಸಾಮರ್ಥ್ಯವಿದೆ, ಪ್ರತಿಯೊಂದು ಪ್ರಶ್ನೆಗೂ ಉತ್ತರ ನೀಡಬೇಕಿಲ್ಲ- ರಕ್ಷಣಾ ಸಚಿವ ಮನೋಹರ್ ಪರಿಕ್ಕರ್

ಲಖನೌ: ಅಣ್ವಸ್ತ್ರ ಬಳಕೆ ಬಗ್ಗೆ ಪಾಕಿಸ್ತಾನ ರಕ್ಷಣಾ ಸಚಿವ ಖವಾಜ ಅಸೀಫ್ ನೀಡಿರುವ ಹೇಳಿಕೆಗೆ ಭಾರತ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಪ್ರತಿಕ್ರಿಯಿಸಿದ್ದು, ತನ್ನ ಗಡಿಯನ್ನು ಸುರಕ್ಷಿತವಾಗಿಡಲು ಭಾರತಕ್ಕೆ ಸಾಮರ್ಥ್ಯವಿದೆ ಎಂದಿದ್ದಾರೆ.

ಪ್ರತಿಯೊಂದು ಪ್ರಶ್ನೆಗೂ ಉತ್ತರ ನೀಡಬೇಕಿಲ್ಲ. ನಾನು ಭಾರತದ ರಕ್ಷಣಾ ಸಚಿವನೇ ಹೊರತು ಪಾಕಿಸ್ತಾನದ ಸಚಿವನಲ್ಲ, ಗಡಿಗಳನ್ನು ಸುರಕ್ಷಿತವಾಗಿರಿಸುತ್ತೇವೆ ಎಂದಿದ್ದಾರೆ. ಅಣ್ವಸ್ತ್ರ ಪ್ರಯೋಗಿಸುವ ಕುರಿತು ಪಾಕಿಸ್ತಾನದ ರಕ್ಷಣಾ ಸಚಿವರ ಹೇಳಿಕೆಗೆ ಪತ್ರಕರ್ತರು ಮನೋಹರ್ ಪರಿಕ್ಕರ್ ಬಳಿ ಪ್ರತಿಕ್ರಿಯೆ ಕೇಳಿದ್ದರು. ಈ ಹಿನ್ನೆಲೆಯಲ್ಲಿ ರಕ್ಷಣಾ ಸಚಿವರು ಹೇಳಿಕೆನೀಡಿದ್ದಾರೆ.  

ನೆರೆಹೊರೆಯ ರಾಷ್ಟ್ರಗಳೊಂದಿಗಿನ ಸಂಬಂಧಕ್ಕೆ ಹುಳಿ ಹಿಂಡುವ ಹೇಳಿಕೆಯಲ್ಲಿ ಅಸ್ತಿತ್ವಕ್ಕೆ ಧಕ್ಕೆಯಾದಲ್ಲಿ ಪಾಕಿಸ್ತಾನ ಅಣ್ವಸ್ತ್ರಗಳನ್ನು ಬಳಸಲಿದೆ ಎಂದು ಪಾಕ್ ರಕ್ಷಣಾ ಸಚಿವ ಹೇಳಿಕೆ ನೀಡಿದ್ದರು. ಇದೇ ವೇಳೆ ಮಯನ್ಮಾರ್ ಮಾದರಿಯ ದಾಳಿಗಳನ್ನು ನಡೆಸುವ ಬಗ್ಗೆ ಮಾಹಿತಿ ನೀಡಲು ಮನೋಹರ್ ಪರಿಕ್ಕರ್ ನಿರಾಕರಿಸಿದ್ದಾರೆ.  ಮಯನ್ಮಾರ್ ಮಾದರಿಯ ದಾಳಿ ನಡೆಸುವುದು ಗೌಪ್ಯ ಮಾಹಿತಿಯಾಗಿದ್ದು ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT