ಮದ್ರಾಸ್ ಹೈಕೋರ್ಟ್ 
ದೇಶ

'ರೇಪಿಸ್ಟ್ ಜತೆ ರಾಜಿ' ಆದೇಶ ಹಿಂಪಡೆದ ಮದ್ರಾಸ್ ಹೈಕೋರ್ಟ್

ಅತ್ಯಾಚಾರ ಮಾಡಿದ ಯುವಕನಿಗೆ ಜಾಮೀನು ನೀಡಿ, ಸಂತ್ರಸ್ತೆಯೊಂದಿಗೆ ಸಂಧಾನ ಮಾಡಿಕೊಳ್ಳುವಂತೆ ನೀಡಿದ್ದ ವಿವಾದಾತ್ಮಾಕ ಆದೇಶವನ್ನು ಶನಿವಾರ ಮದ್ರಾಸ್ ಹೈಕೋರ್ಟ್ ಹಿಂಪಡೆದಿದೆ.

ಚೆನ್ನೈ: ಅತ್ಯಾಚಾರ ಮಾಡಿದ ಯುವಕನಿಗೆ ಜಾಮೀನು ನೀಡಿ, ಸಂತ್ರಸ್ತೆಯೊಂದಿಗೆ ಸಂಧಾನ ಮಾಡಿಕೊಳ್ಳುವಂತೆ ನೀಡಿದ್ದ ವಿವಾದಾತ್ಮಾಕ ಆದೇಶವನ್ನು ಶನಿವಾರ ಮದ್ರಾಸ್ ಹೈಕೋರ್ಟ್ ಹಿಂಪಡೆದಿದೆ.

ತಮಿಳುನಾಡಿನ ಮಹಿಳೆಯೊಬ್ಬರ ಮೇಲೆ ಆಕೆ ಅಪ್ರಾಪ್ತೆಯಾಗಿದ್ದಾಗ ಅತ್ಯಾಚಾರ ನಡೆದಿತ್ತು. ಈಗ ಆಕೆ ಒಂದು ಮಗುವಿನ ತಾಯಿಯಾಗಿದ್ದು, ಭವಿಷ್ಯದ ದೃಷ್ಟಿಯಿಂದ ಮಹಿಳೆ ರಾಜಿಮಾಡಿಕೊಳ್ಳಲಿ ಎಂದು ಹೈಕೋರ್ಟ್ ನ್ಯಾಯಮೂರ್ತಿ ಪಿ.ದೇವದಾಸ್ ಅವರು ಪ್ರಕರಣನ್ನು ಆಪ್ತ ಸಮಾಲೋಚನಾ ಕೇಂದ್ರಕ್ಕೆ ಒಪ್ಪಿಸಿದ್ದರು. ಅಲ್ಲದೆ ಸಂತ್ರಸ್ಥೆಯೊಂದಿಗೆ ಸಮಾಲೋಚನೆಗಾಗಿ ಅತ್ಯಾಚಾರ ಅಪರಾಧಿ ಮೋಹನ್ಗೆ ಜಾಮೀನು ಮಂಜೂರು ಮಾಡಿದ್ದರು. ಇದು ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ಈ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಅತ್ಯಾಚಾರ ಸಂತ್ರಸ್ತೆಗೆ ಅತ್ಯಾಚಾರಿ ಜತೆ ರಾಜಿ ಮಾಡಿಕೊಳ್ಳವಂತೆ ಸೂಚಿಸುವುದು ತಪ್ಪು ಎಂದು ಅಭಿಪ್ರಾಯಪಟ್ಟಿತ್ತು.

ಮಹಿಳೆಯ ದೇಹ ಎಂಬುದು ಆಕೆಗೆ ದೇಗುಲವಿದ್ದಂತೆ ಅಲ್ಲಿ ಮಧ್ಯಸ್ಥಿಕೆ ವಹಿಸುವುದು ಸಲ್ಲ. ಅದೇ ವೇಳೆ ಇಂಥಾ ಪ್ರಕರಣಗಳಲ್ಲಿ ರಾಜಿ ಆಗುವುದರಿಂದ ಮಹಿಳೆಯ ಘನತೆಗೆ ಧಕ್ಕೆ ಉಂಟಾಗುವುದು ಎಂದು ಸುಪ್ರೀಂಕೋರ್ಟ್‌ ಹೇಳಿತ್ತು.

ಅತ್ಯಾಚಾರ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜುಲೈ 2012 ರಲ್ಲಿ ಮೋಹನ್ ಗೆ ಸೆಷನ್ಸ್ ನ್ಯಾಯಾಲಯ 7 ವರ್ಷ ಜೈಲು ಶಿಕ್ಷೆ, 2 ಲಕ್ಷ ದಂಡ ವಿಧಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT