ಅಮರನಾಥ ಯಾತ್ರೆ (ಸಂಗ್ರಹ ಚಿತ್ರ) 
ದೇಶ

ಹದಗೆಟ್ಟ ಹವಾಮಾನ: ಅಮರನಾಥ ಯಾತ್ರೆ ಸ್ಥಗಿತ

ಜಮ್ಮು-ಕಾಶ್ಮೀರದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಹದಗೆಟ್ಟ ಪರಿಣಾಮದಿಂದಾಗಿ ಅಮರನಾಥ ಯಾತ್ರೆಯನ್ನು ಭಾನುವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ...

ಜಮ್ಮು: ಜಮ್ಮು-ಕಾಶ್ಮೀರದಾದ್ಯಂತ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಹದಗೆಟ್ಟ ಪರಿಣಾಮದಿಂದಾಗಿ ಅಮರನಾಥ ಯಾತ್ರೆಯನ್ನು ಭಾನುವಾರ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.

ಇಂದು ಬೆಳಗ್ಗಿಯಿಂದಲೇ ಕಣಿವೆ ಪ್ರದೇಶಗಲ್ಲಿ ಭಾರಿ ಮಳೆ ಸುರಿಯುತ್ತಿದೆ. ಹವಾಮಾನದ ಪರಿಣಾಮ ದಕ್ಷಿಣ ಕಾಶ್ಮೀರದ ಪಹಲ್ಲಮ್ ಮತ್ತು ಉತ್ತರ ಕಾಶ್ಮೀರದ ಬಲ್ತಾಲ್ ಮಾರ್ಗದಲ್ಲಿ ಸಂಚಾರ ಸ್ಥಗಿತಗೊಳಿಸಲಾಗಿದ್ದು, ಸುರಕ್ಷತೆಯ ದೃಷ್ಟಿಯಿಂದ ಅಮರನಾಥ ಯಾತ್ರಿಗಳನ್ನು ಬಲ್ತಾಲ್ ಹಾಗೂ ಪಹಲ್ಲಮ್ ಶಿಬಿರಗಳಲ್ಲೇ ಉಳಿಸಲಾಗಿದೆ. ಹವಾಮಾನ ಸುಧಾರಣೆಯ ನಂತರವಷ್ಟೇ ಯಾತ್ರೆ ಮುಂದುವರೆಸುವ ಬಗ್ಗೆ ನಿರ್ಧಾರ ಕೈಗೊಳ್ಳುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದೂಗಳ ಪವಿತ್ರ ಸ್ಥಳವಾಗಿರುವ ಅಮರನಾಥ್ ಹಿಮಲಿಂಗದ ದರ್ಶನ ಪಡೆಯಲು ಒಂದೂವರೆ ಲಕ್ಷಕ್ಕೂ ಹೆಚ್ಚು ಭಕ್ತರು ಈ ಮಾರ್ಗದಲ್ಲಿ ತೆರಳುತ್ತಿದ್ದಾರೆ. ಎಲ್ಲ ಭಕ್ತರಿಗೂ ತಾತ್ಕಾಲಿಕ ವಸತಿ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT