ಮಾಜಿ ವಿದೇಶಾಂಗ ಇಲಾಖೆ ಸಚಿವ ಸಲ್ಮಾನ್ ಖುರ್ಷಿದ್ (ಸಂಗ್ರಹ ಚಿತ್ರ) 
ದೇಶ

ಪಾಕಿಸ್ತಾನಕ್ಕೆ ಮೋದಿ ಭೇಟಿಯಿಂದ ಗರ್ಮನಾರ್ಹ ಫಲಿತಾಂಶ ಸಾಧ್ಯವಿಲ್ಲ : ಖುರ್ಷಿದ್

ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಭೇಟಿಯಿಂದ ಗಮನಾರ್ಹ ಫಲಿತಾಂಶವನ್ನು ನಿರೀಕ್ಷಿಸಬಾರದು ಎಂದು ಕಾಂಗ್ರೆಸ್ ಸಲಹೆ ನೀಡಿದೆ.

ಹೈದರಾಬಾದ್: ಪಾಕಿಸ್ತಾನಕ್ಕೆ ಭೇಟಿ ನೀಡುತ್ತಿರುವ ಪ್ರಧಾನಿ ನರೇಂದ್ರ ಮೋದಿ ತಮ್ಮ ಭೇಟಿಯಿಂದ ಗಮನಾರ್ಹ ಫಲಿತಾಂಶವನ್ನು ನಿರೀಕ್ಷಿಸಬಾರದು ಎಂದು ಕಾಂಗ್ರೆಸ್ ಸಲಹೆ ನೀಡಿದೆ.
2016 ರಲ್ಲಿ ನಲ್ಲಿ ನಡೆಯಲಿರುವ ಸಾರ್ಕ್ ಶೃಂಗಸಭೆಯಲ್ಲಿ ಭಾಗವಹಿಸಲು ಇಸ್ಲಾಮಾಬಾದ್ ಗೆ ಭೇಟಿ ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ಪ್ರತಿಕ್ರಿಯಿಸಿದ್ದು ಮೋದಿ ಭೇಟಿಯಿಂದ ದ್ವಿಪಕ್ಷೀಯ ಸಂಬಂಧದಲ್ಲಿ  ಗಮನಾರ್ಹವಾದ ಅಥವಾ ಐತಿಹಾಸಿಕ ಫಲಿತಾಂಶ ನಿರೀಕ್ಷಿಸುವುದಕ್ಕೆ ಸಾಧ್ಯವಿಲ್ಲ. ಪ್ರಧಾನಿ ಮೋದಿ ಸಹ ಇಂತಹ ಫಲಿತಾಂಶವನ್ನು ನಿರೀಕ್ಷಿಸಬಾರದು ಎಂದು ಮಾಜಿ ವಿದೇಶಾಂಗ ಇಲಾಖೆ ಸಚಿವ ಸಲ್ಮಾನ್ ಖುರ್ಷಿದ್ ಹೇಳಿದ್ದಾರೆ.

ಹಲವು ದಶಕಗಳಿಂದ ಪಾಕಿಸ್ತಾನದೊಂದಿಗೆ ದ್ವಿಪಕ್ಷೀಯ ಸಂಬಂಧ ವೃದ್ಧಿಗೊಳಿಸಲು ಭಾರತ ಶ್ರಮಿಸುತ್ತಿದೆ. ಆದರೆ ಅದರಿಂದ ಯಾವುದೇ ಸಕಾರಾತ್ಮಕ ಫಲಿತಾಂಶವೂ ದೊರೆತಿಲ್ಲ. ಅದ್ದರಿಂದ ಪ್ರಧಾನಿ ಮೋದಿ ವರು ಹೆಚ್ಚಿನ ನಿರೀಕ್ಷೆ ಹೊಂದುವುದು ತಪ್ಪು. ಈ ವರೆಗೂ ಪಾಕಿಸ್ತಾನದೊಂದಿಗಿನ ದ್ವಿಪಕ್ಷೀಯ ಮಾತುಕತೆಯ ಫಲಿತಾಂಶ ತೃಪ್ತಿದಾಯಕವಾಗಿಲ್ಲ. ಈ ಬಾರಿ ಏನಾಗಲಿದೆ ಎಂಬುದನ್ನು ಕಾದುನೋಡಬೇಕಿದೆಯೆ ಹೊರತು ಸಂಭ್ರಮಿಸುವ ಅಗತ್ಯವಿಲ್ಲ ಎಂದು ಹೇಳಿದೆ.

ಪಾಕಿಸ್ತಾನದಲ್ಲಿ ಸೇನೆಯ ಪಾತ್ರ ಏನೆಂಬುದು ನಮಗೆ ತಿಳಿದಿದೆ. ಆದ್ದರಿಂದ ದ್ವಿಪಕ್ಷೀಯ ಮಾತುಕತೆ ನಡೆದರೂ ಅದರಿಂದ ಯಾವುದೇ ಪ್ರಯೋಜನವಾಗುವುದಿಲ್ಲ ಎಂದು ಖುರ್ಷಿದ್ ಹೇಳಿದ್ದಾರೆ. ಪಾಕಿಸ್ತಾನದೊಂದಿಗೆ ಮಾತುಕತೆ ಪ್ರಾಂಭಿಸಿರುವ ಮೋದಿ ಕ್ರಮಕ್ಕೆ ಕಾಂಗ್ರೆಸ್ ಬೆಂಬಲವಿದೆ. ನಮ್ಮೊಂದಿಗೆ ಮೋದಿ ಮಾತನಾಡುವುದಿಲ್ಲ. ನಮ್ಮೊಂದಿಗೆ ಮಾತನಾಡುವವರೆಗೂ ಪಾಕಿಸ್ತಾನದೊಂದಿಗೆ ಮೋದಿ ಏನು ಮಾತನಾಡಿದರು ಎಂಬುದು ನಮಗೆ ತಿಳಿಯುವುದಿಲ್ಲ ಎಂದು ಖುರ್ಷಿದ್ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT