ಪ್ರಧಾನಿ ನರೇಂದ್ರ ಮೋದಿ 
ದೇಶ

ಭೂಸ್ವಾಧೀನ ವಿಧೇಯಕ ಮುಂದಿನ ವಾರ ಸಿಎಂಗಳ ಜತೆ ಪ್ರಧಾನಿ ಮೋದಿ ಚರ್ಚೆ

ಭೂಸ್ವಾಧೀನ ವಿಧೇಯಕಕ್ಕೆ ಅಂಗೀಕಾರ ಪಡೆಯುವ ಮತ್ತೊಂದು ಪ್ರಯತ್ನವೆಂಬಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ...

ನವದೆಹಲಿ: ಭೂಸ್ವಾಧೀನ ವಿಧೇಯಕಕ್ಕೆ ಅಂಗೀಕಾರ ಪಡೆಯುವ ಮತ್ತೊಂದು ಪ್ರಯತ್ನವೆಂಬಂತೆ ಪ್ರಧಾನಿ ನರೇಂದ್ರ ಮೋದಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ. ಮುಂದಿನ ವಾರ ಈ ಸಭೆ ನಡೆಯಲಿದ್ದು, ವಿವಾದಾತ್ಮಕ ಭೂಸ್ವಾಧೀನ ವಿಧೇಯಕದ ಬಗ್ಗೆ ಸಿಎಂಗಳೊಂದಿಗೆ ಪ್ರಧಾನಿ ಚರ್ಚಿಸಲಿದ್ದಾರೆ. ಹೇಗಾದರೂ ಮಾಡಿ ಈ ವಿಧೇಯಕದ ವಿಚಾರದಲ್ಲಿ ಒಮ್ಮತ ಮೂಡಿಸಬೇಕೆಂಬುದು ಈ ಸಭೆಯ ಉದ್ದೇಶವಾಗಿದೆ. ಪ್ರಧಾನಿ ಮೋದಿ ಅವರು ಸಂಸತ್‍ನ ಮುಂಗಾರು ಅಧಿವೇಶನ ಆರಂಭವಾಗುವ ಒಂದು ವಾರ ಮೊದಲು ಅಂದರೆ ಜು.15ರಂದು ನೀತಿ ಆಯೋಗದ ಆಡಳಿತ ಮಂಡಳಿಯ ಎರಡನೇ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ಅನೇಕ ವಿಚಾರಗಳ ಬಗ್ಗೆ ಚರ್ಚೆಯಾಗಲಿದ್ದು, ಭೂಸ್ವಾಧೀನ ವಿಧೇಯಕಕ್ಕೆ ಆದ್ಯತೆ ನೀಡಲಾಗುವುದು ಎಂದು ನೀತಿ ಆಯೋಗದ ಸದಸ್ಯ ಬಿಬೇಕ್ ದೆಬ್ರಾಯ್ ತಿಳಿಸಿದ್ದಾರೆ. ಈ ಬಾರಿಯ ಮುಂಗಾರು ಅಧಿವೇಶನದಲ್ಲಿ ಭೂಸ್ವಾಧೀನ ವಿಧೇಯಕ, ಸರಕು ಮತ್ತು ಸೇವಾ ತೆರಿಗೆ, ಕಾರ್ಮಿಕ ವಿಧೇಯಕ ಹಾಗೂ ರಾಜಕೀಯ ಹಗರಣಗಳನ್ನಿಟ್ಟುಕೊಂಡು ಸರ್ಕಾರದ ವಿರುದ್ಧ ದಾಳಿ ನಡೆಸಲು ಪ್ರತಿಪಕ್ಷಗಳು ಸಿದ್ಧತೆ ನಡೆಸುತ್ತಿವೆ ಎಂದು ಹೇಳಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Women's Reservation Bill: ಮಹಿಳೆಯರ ಕೋಪ ತಟ್ಟದೇ ಬಿಡಲ್ಲ..; ವಿಪಕ್ಷಗಳ ವಿರುದ್ಧ Amit Shah ಕೆಂಡಾಮಂಡಲ!

ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆ ಸೋಲು; ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ NDA ವಿಫಲ

ಇರಾನ್ ಮಹತ್ವದ ನಿರ್ಧಾರ: ಹಾರ್ಮುಜ್ ಜಲಸಂಧಿ ನಿರ್ಬಂಧ ಸಂಪೂರ್ಣ ತೆರವು; ವಿದೇಶಾಂಗ ಸಚಿವರ ಘೋಷಣೆ!

ಅದು ಅವರ ಸೀಟ್ ಅಲ್ಲ.. ಮುಸ್ಲಿಮರಿಗೆ ಕಾಂಗ್ರೆಸ್ ಮಾಡಿದಷ್ಟು ಸಹಾಯ ಯಾರೂ ಮಾಡಿಲ್ಲ: ಡಿಸಿಎಂ DK Shivakumar

RCB ವಿರುದ್ಧದ ಪಂದ್ಯದ ವೇಳೆ ಮೊಬೈಲ್ ನೋಡಿದ ರೋಮಿ ಭಿಂದರ್​ಗೆ 1 ಲಕ್ಷ ರೂ. ದಂಡ; ವೈಭವ್ ಸೂರ್ಯವಂಶಿ ಜಸ್ಟ್‌ ಮಿಸ್‌!

SCROLL FOR NEXT