ರಾಜನಾಥ್ ಸಿಂಗ್ 
ದೇಶ

ಸಶಸ್ತ್ರಪಡೆ ಕಡಿತಕ್ಕೆ ರಾಜನಾಥ್ ಚಿಂತನೆ

ಈಶಾನ್ಯಭಾರತದಲ್ಲಿ ರಕ್ಷಣಾವ್ಯವಸ್ಥೆಯಲ್ಲಿ ಈಗಾಗಲೇ ಸುಧಾರಣೆ ಕಂಡಿರುವುದರಿಂದ ಅಲ್ಲಿರುವ ಕೇಂದ್ರ ರಕ್ಷಣಾಪಡೆಗಳ ಸಂಖ್ಯೆ ಕಡಿಮೆಮಾಡಬಹುದು...

ಗುವಾಹಟಿ: ಈಶಾನ್ಯಭಾರತದಲ್ಲಿ ರಕ್ಷಣಾವ್ಯವಸ್ಥೆಯಲ್ಲಿ ಈಗಾಗಲೇ ಸುಧಾರಣೆ ಕಂಡಿರುವುದರಿಂದ ಅಲ್ಲಿರುವ ಕೇಂದ್ರ ರಕ್ಷಣಾಪಡೆಗಳ ಸಂಖ್ಯೆ ಕಡಿಮೆಮಾಡಬಹುದು ಎಂದು ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ. ``ರಾಜ್ಯಾದ್ಯಂತ ಆಂತರಿಕ ಗಲಭೆಗಳು ಅತಿಯಾಗಿದ್ದ ಕಾಲದಲ್ಲಿ ಇಷ್ಟೊಂದು ತುಕಡಿಗಳು ಇರಲಿಲ್ಲ. ಈಗ ಪರಿಸ್ಥಿತಿ ತುಂಬ ಸುಧಾರಿಸಿರುವುದರಿಂದ ಇಷ್ಟೊಂದು ಸೈನಿಕರ ಅಗತ್ಯವಿಲ್ಲ'' ಎಂದು ಈಶಾನ್ಯ ರಾಜ್ಯಗಳ ಮುಖ್ಯಮಂತ್ರಿಗಳ ಸಭೆಯಲ್ಲಿ ರಾಜನಾಥ್ ಹೇಳಿದ್ದಾರೆ. ಈಶಾನ್ಯರಾಜ್ಯದ ಎಲ್ಲ ಮುಖ್ಯಮಂತ್ರಿಗಳು ತಮ್ಮ ರಾಜ್ಯಗಳಲ್ಲಿನ ಸಶಸ್ತ್ರಪಡೆಯ ನೈಜ ಚಿತ್ರಣ ಹಾಗೂ ಲೆಕ್ಕ ನೀಡಿದಲ್ಲಿ, ಅಗತ್ಯವಿರುವಷ್ಟು ರಕ್ಷಣಾಪಡೆಯನ್ನು ನೀಡುವ ಭರವಸೆ ಸಚಿವರು ನೀಡಿದ್ದಾರೆ. ಹಾಗಂತ ರಕ್ಷಣಾ ವಿಚಾರದಲ್ಲಿ ಯಾವುದೇ ರಾಜಿಗೂ ಸಿದ್ಧವಿಲ್ಲವೆಂದು ಹೇಳಲು ಅವರು ಮರೆಯಲಿಲ್ಲ. ಆಂತರಿಕ ಗಲಭೆಗಳು ಕ್ಷೀಣಿಸಿರುವುದಕ್ಕೆ ರಾಜ್ಯಗಳ ಮುಖ್ಯಮಂತ್ರಿಗಳನ್ನು ಅಭಿನಂದಿಸಿದ ರಾಜನಾಥ್, ಮಿಜೋರಾಂ ಮತ್ತು ತ್ರಿಪುರಾದಲ್ಲಿ ಗಲಭೆಗಳು ಹೆಚ್ಚೂಕಮ್ಮಿ ಸಂಪೂರ್ಣವಾಗಿ ನಿಂತೇ ಹೋಗಿವೆ ಎಂಬ ಮಾಹಿತಿ ಹಂಚಿಕೊಂಡರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!