26/11 ಮುಂಬೈ ಉಗ್ರರ ದಾಳಿ 
ದೇಶ

26/11 ಮುಂಬೈ ದಾಳಿ: ಮತ್ತಷ್ಟು ಸಾಕ್ಷ್ಯಾಧಾರ ಕೇಳಿದ ಪಾಕಿಸ್ತಾನ

ಮುಂಬೈ ದಾಳಿ ತನಿಖೆ ಚುರುಕುಗೊಳಿಸುವುದಾಗಿ ಭರವಸೆ ನೀಡಿದ್ದ ಪಾಕಿಸ್ತಾನ ಇದೀಗ ಪ್ರಕರಣ ಕುರಿತಂತೆ ವಿಚಾರಣೆ ನಡೆಸಲು ಮತ್ತಷ್ಟು ಸಾಕ್ಷ್ಯಾಧಾರ ಅವಶ್ಯಕತೆಯಿದ್ದು, ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಭಾರತಕ್ಕೆ ಸೋಮವಾರ...

ಇಸ್ಲಾಮಾಬಾದ್: ಮುಂಬೈ ದಾಳಿ ತನಿಖೆ ಚುರುಕುಗೊಳಿಸುವುದಾಗಿ ಭರವಸೆ ನೀಡಿದ್ದ ಪಾಕಿಸ್ತಾನ ಇದೀಗ ಪ್ರಕರಣ ಕುರಿತಂತೆ ವಿಚಾರಣೆ ನಡೆಸಲು ಮತ್ತಷ್ಟು ಸಾಕ್ಷ್ಯಾಧಾರ ಅವಶ್ಯಕತೆಯಿದ್ದು, ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಭಾರತಕ್ಕೆ ಸೋಮವಾರ ಕೇಳಿದೆ.

ರಷ್ಯಾದ ಉಫಾ ನಗರಿಯಲ್ಲಿ ನಡೆದ ಶಾಂಘೈ ಸಹಕಾರ ಸಂಘಟನೆ ಶೃಂಗಸಭೆ ಕುರಿತಂತೆ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿರುವ ಪಾಕಿಸ್ತಾನ ರಾಷ್ಟ್ರೀಯ ಭದ್ರತೆ ಸಲಹೆಗಾರ ಸರ್ತಾಜ್ ಅಜಿಜ್ ಅವರು, ಮುಂಬೈ ದಾಳಿ ಪ್ರಕರಣ ಸಂಬಂಧ ವಿಚಾರಣೆ ನಡೆಸಲು ಪಾಕಿಸ್ತಾನಕ್ಕೆ ಮತ್ತಷ್ಟು ಸಾಕ್ಷ್ಯಾಧಾರಗಳ ಅವಶ್ಯಕತೆಯಿದೆ ಎಂದು ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಪಾಕಿಸ್ತಾನ ಪ್ರಧಾನಿ ನವಾಜ್ ಶರೀಫ್ ನಡುವೆ ನಡೆದ ಚರ್ಚೆ ಅನೌಚಾರಿಕವಾಗಿದ್ದು, ಚರ್ಚೆಯಲ್ಲಿ ಯಾವುದೇ ರೀತಿಯ ಒಪ್ಪಂದಗಳಾಗಿಲ್ಲ. ಆದರೆ, ಮುಂಬೈ ದಾಳಿ ಕುರಿತಂತೆ ಮತ್ತಷ್ಟು ಸಾಕ್ಷ್ಯಾಧಾರಗಳನ್ನು ಒದಗಿಸುವಂತೆ ಮೋದಿ ಅವರನ್ನು ನವಾಜ್ ಷರೀಫ್ ಕೇಳಿದ್ದರು ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬೆಳಗಾವಿ: ಬೀದಿ ನಾಯಿಗಳ ಅಟ್ಟಹಾಸ, 2 ವರ್ಷದ ಬಾಲಕಿ ಮೇಲೆ ಭೀಕರ ದಾಳಿ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

SCROLL FOR NEXT