ವಾಮಾಚಾರಕ್ಕೆ ಸಂಬಂಧಪಟ್ಟ ಸಂಗ್ರಹ ಚಿತ್ರ 
ದೇಶ

ವಾಮಾಚಾರ ಶಂಕೆ: ಒಂದೇ ಕುಟುಂಬದ 6 ಮಂದಿ ಸಾವು

ಭೀಕರ ವಾಮಾಚಾರ ಶಂಕೆ ಘಟನೆಯೊಂದರಲ್ಲಿ, ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಾವನ್ನಪ್ಪಿರುವ...

ಭುವನೇಶ್ವರ:ಭೀಕರ ವಾಮಾಚಾರ ಶಂಕೆ ಘಟನೆಯೊಂದರಲ್ಲಿ, ಒಂದೇ ಕುಟುಂಬದ ನಾಲ್ವರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಾವನ್ನಪ್ಪಿರುವ ಘಟನೆ ಒರಿಸ್ಸಾ ರಾಜ್ಯದ ಕಿಯೋಂಜರ್ ಜಿಲ್ಲೆಯ ಕುಗ್ರಾಮವೊಂದರಲ್ಲಿ ನಡೆದಿದೆ.

ದಂಪತಿ ಮತ್ತು ಮಕ್ಕಳು ರಕ್ತದ ಮಡುವಿನಲ್ಲಿ ಬಿದ್ದಿದ್ದರು ಎಂದು ಘಟನೆ ನಡೆದ ಸ್ಥಳಕ್ಕೆ ಧಾವಿಸಿದ್ದ ಪೊಲೀಸರು ತಿಳಿಸಿದ್ದಾರೆ. ಅಪರಿಚಿತ ದುಷ್ಕರ್ಮಿಗಳು ವಾಮಾಚಾರ ನಡೆಸಿರಬಹುದೆಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.  ಇದರಲ್ಲಿ ಸ್ಥಳೀಯ ಅರ್ಚಕನೊಬ್ಬನ ಪಾತ್ರ ಇರಬಹುದು ಎಂದು ಪ್ರತ್ಯಕ್ಷದರ್ಶಿಯೊಬ್ಬರು ಪೊಲೀಸರಿಗೆ ತಿಳಿಸಿದ್ದಾರೆ.

ಈ ಸಂಬಂಧ ಪೊಲೀಸರು ಓರ್ವ ಶಂಕಿತನನ್ನು ಬಂಧಿಸಿದ್ದು, ಇನ್ನುಳಿದವರು ತಲೆಮರೆಸಿಕೊಂಡಿದ್ದಾರೆ. ಅವರಿಗಾಗಿ ಹುಡುಕಾಟ ನಡೆಯುತ್ತಿದೆ. ಭಾರತೀಯ ದಂಡಸಂಹಿತೆಯ ಸೆಕ್ಷನ್ 302 ಮತ್ತು 34ರಡಿ ಕೇಸು ದಾಖಲಾಗಿದೆ.

ಕಿಯೋಂಜರ್ ನಿಂದ 70 ಕಿ.ಮೀ ದೂರದಲ್ಲಿ ಜೋಡಾ ಪೊಲೀಸ್ ಸ್ಟೇಷನ್ ನ ಸರಹದ್ದಿನ ಮುಂಡಾ ಸಹಿ ಎಂಬಲ್ಲಿ ಈ ಘಟನೆ ನಡೆದಿದೆ. ಕುಟುಂಬಸ್ಥರ ಮೇಲೆ ದುಷ್ಕರ್ಮಿಗಳು ವಾಮಾಚಾರ ನಡೆಸಿದ್ದರಿಂದ ಸಾವನ್ನಪ್ಪಿರಬಹುದು ಎಂದು ಪೊಲೀಸರ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Belagavi: ಲವರ್ ಜೊತೆ ಮಗಳು ಪರಾರಿ, ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು, Video!

ಅಧಿಕೃತವಾಗಿ 'ಹೊಸ ಗರ್ಲ್‌ ಫ್ರೆಂಡ್‌' ಪರಿಚಯಿಸಿದ ಹಾರ್ದಿಕ್ ಪಾಂಡ್ಯ! Video

2nd Test, Day 2: ವಿಂಡೀಸ್ ವಿರುದ್ಧ ಶತಕ, ವಿರಾಟ್ ಕೊಹ್ಲಿ ದಾಖಲೆ ಸರಿಗಟ್ಟಿದ ಶುಭ್ ಮನ್ ಗಿಲ್!

SCROLL FOR NEXT