ಕಲ್ಲಿದ್ದಲು ಹಂಚಿಕೆ ಹಗರಣ 
ದೇಶ

ಕಲ್ಲಿದ್ದಲು ಹಗರಣ: ಮಧುಕೊಡಾ ಸೇರಿ 9 ಜನರ ವಿರುದ್ಧ ದೋಷಾರೋಪಣೆ ಸಲ್ಲಿಸಲು ಕೋರ್ಟ್ ಆದೇಶ

ಕಲ್ಲಿದ್ದಲು ಹಂಚಿಕೆ ಹಗರಣದ ಸಂಬಂಧ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡಾ, ಸೇರಿದಂತೆ ಒಟ್ಟು 9 ಜನರನ್ನು ವಿಚಾರಣೆಗೆ ಒಳಪಡಿಸಬೇಕೆಂದು ಸಿಬಿಐ ವಿಶೇಷ ನ್ಯಾಯಲಾಯ ಆದೇಶ ನೀಡಿದೆ.

ನವದೆಹಲಿ: ಕಲ್ಲಿದ್ದಲು ಹಂಚಿಕೆ ಹಗರಣದ ಸಂಬಂಧ ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮಧುಕೋಡಾ, ಕಲ್ಲಿದ್ದಲು ಇಲಾಖೆ ಮಾಜಿ ಕಾರ್ಯದರ್ಶಿ ಹೆಚ್.ಸಿ ಗುಪ್ತಾ, ಜಾರ್ಖಂಡ್ ನ ಮಾಜಿ ಮುಖ್ಯ ಕಾರ್ಯದರ್ಶಿ ಅಶೋಕ್ ಕುಮಾರ್ ಬಸು ಸೇರಿದಂತೆ ಒಟ್ಟು 9 ಜನರನ್ನು ವಿಚಾರಣೆಗೆ ಒಳಪಡಿಸಬೇಕೆಂದು ಸಿಬಿಐ ವಿಶೇಷ ನ್ಯಾಯಾಲಯ ಆದೇಶ ನೀಡಿದೆ.

ಸರ್ಕಾರಿ ನೌಕರರಾದ ಬಸಂತ್ ಕುಮಾರ್ ಭಟ್ಟಾಚಾರ್ಯ ಹಾಗೂ ಬಿಪಿನ್ ಬಿಹಾರಿ ಸಿಂಗ್, ವಿನಿ ಕಬ್ಬಿಣ ಮತ್ತು ಉಕ್ಕು ಉದ್ಯೋಗ್ ಲಿಮಿಟೆಡ್(ವಿ.ಐ.ಎಸ್.ಯು.ಎಲ್) ನ ನಿರ್ದೇಶಕ ವೈಭವ್ ತುಲ್ಸ್ಯಾನ್, ಮಧುಕೋಡಾ ಅವರ ಆಪ್ತ ವಿಜಯ್ ಜೋಷಿ ಹಾಗೂ ಲೆಕ್ಕಪರಿಶೋಧಕರ ನವೀನ್ ಕುಮಾರ್ ವಿರುದ್ಧ ಕ್ರಿಮಿನಲ್ ಸಂಚು, ಮೋಸ ಆರೋಪದಡಿ ದೋಷಾರೋಪಣೆ ಪಟ್ಟಿ ಸಲ್ಲಿಸಬೇಕೆಂದು ಕೋರ್ಟ್ ನ ನ್ಯಾ. ಭರತ್ ಪರಾಶರ್ ಸಿಬಿಐ ಪೊಲೀಸರಿಗೆ  ಆದೇಶ ನೀಡಿದ್ದಾರೆ.

ಹಗರಣಕ್ಕೆ ಸಂಬಂಧಿಸಿದ ಒಟ್ಟು 9 ಆರೋಪಿಗಳ ವಿರುದ್ಧ ಭ್ರಷ್ಟಾಚ ತಡೆ ಕಾಯ್ದೆಯ ಐಪಿಸಿ ಸೆಕ್ಷನ್ 120 ಬಿ ( ಕ್ರಿಮಿನಲ್ ಸಂಚು) 420 (ಮೋಸ) ಪ್ರಕಾರ ದೋಷಾರೋಪಣೆ ಸಲ್ಲಿಸುವಂತೆ ಆದೇಶಿಸಿ ಮುಂದಿನ ವಿಚಾರಣೆಯನ್ನು ಜುಲೈ.31  ಕ್ಕೆ ಮುಂದೂಡಿದ್ದಾರೆ.

ಕಲ್ಲಿದ್ದಲು ಹಂಚಿಕೆಯಲ್ಲಿ ಮಧು ಕೊಡ ಹಾಗೂ ಜಾರ್ಖಂಡ್ ನ ಮಾಜಿ ಮುಖ್ಯ ಕಾರ್ಯದರ್ಶಿ ಅಶೋಕ್ ಬಸು ವಿನಿ ಕಬ್ಬಿಣ ಮತ್ತು ಉಕ್ಕು ಉದ್ಯೋಗ್ ಸಂಸ್ಥೆಗೆ ಅನುಕೂಲ ಮಾಡಿಕೊಡುವುದಕ್ಕಾಗಿ ಸಂಚು ರೂಪಿಸಿದ್ದರು ಎಂದು ಸಿಬಿಐ ಈ ಹಿಂದೆ ಕೋರ್ಟ್ ಗೆ ಹೇಳಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT