ಧಮೇಂದ್ರ ಪ್ರಧಾನ್ 
ದೇಶ

ವ್ಯಾಪಂ ಹಗರಣದ ಆರೋಪಿಗಳಿಂದ ಯಾವುದೇ ಸೌಲಭ್ಯ ಪಡೆದಿಲ್ಲ: ಧಮೇಂದ್ರ

ವ್ಯಾಪಂ ಹಗರಣದ ಪ್ರಮುಖ ಆರೋಪಿಗಳಿಂದ ಹಣ ಪಡೆದಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್ ತಳ್ಳಿಹಾಕಿದ್ದಾರೆ...

ನವದೆಹಲಿ: ವ್ಯಾಪಂ ಹಗರಣದ ಪ್ರಮುಖ ಆರೋಪಿಗಳಿಂದ ಹಣ ಪಡೆದಿದ್ದಾರೆ ಎಂಬ ಕಾಂಗ್ರೆಸ್ ಆರೋಪವನ್ನು ಕೇಂದ್ರ ಪೆಟ್ರೋಲಿಯಂ ಸಚಿವ ಧಮೇಂದ್ರ ಪ್ರಧಾನ್ ತಳ್ಳಿಹಾಕಿದ್ದಾರೆ.

2010ರಲ್ಲಿ ಭೂಪಾಲ್ ಗೆ ಭೇಟಿಯ ವಿಮಾನ ಪ್ರಯಾಣ ಟಿಕೆಟ್ ಗಳನ್ನು ಸುಧೀರ್ ಶರ್ಮಾ ಮಾಡಿಸಿದ್ದರು ಎಂದು ಕಾಂಗ್ರೆಸ್ ದೂರಿತ್ತು. ಈ ಆರೋಪವನ್ನು ತಳ್ಳಿ ಹಾಕಿರುವ ಪ್ರಧಾನ್ ನನ್ನ ಭೂಪಾಲ್ ಪ್ರವಾಸದ ಟಿಕೆಟ್ ಗಳನ್ನು ನನ್ನ ಪಕ್ಷ ನೀಡಿತ್ತು ಎಂದು ಹೇಳಿದ್ದಾರೆ.

ಯಾರಿಂದಲೂ ನಾನು ಟಿಕೆಟ್ ಗಳನ್ನು ತೆಗೆದುಕೊಂಡಿಲ್ಲ. ನಮ್ಮ ಪಕ್ಷದ ಪ್ರಧಾನ ಕಾರ್ಯದರ್ಶಿಗಳೇ ನಮ್ಮ ಟಿಕೆಟ್ ಗಳನ್ನು ಬುಕ್ ಮಾಡಿದ್ದರು ಎಂದು ಹೇಳಿದ್ದಾರೆ.

ವ್ಯಾಪಂ ಹಗರಣದ ಕಿಂಗ್ ಪಿನ್ ಸುಧೀರ್ ಶರ್ಮಾ ಮತ್ತು ಲಕ್ಷ್ಮಿಕಾಂತ್ ಶರ್ಮಾ ಅವರು ಕೇಂದ್ರ ಸಚಿವ ಧಮೇಂದ್ರ ಪ್ರಧಾನ್ ರೊಂದಿಗೆ ಹಣವನ್ನು ಪಾಲು ಮಾಡಿಕೊಂಡಿದ್ದಾರೆ. ಅಲ್ಲದೆ ಧಮೇಂದ್ರ ಪ್ರಧಾನ್ ರ ವಿಮಾನ ಪ್ರಯಾಣದ ವೆಚ್ಚವನ್ನು ಸುಧೀರ್ ಶರ್ಮಾ ಭರಿಸಿರುವುದಾಗಿ ಕಾಂಗ್ರೆಸ್ ಆರೋಪಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

"ಸ್ವತಂತ್ರ ಭಾರತದ ಅತಿದೊಡ್ಡ ಸುಧಾರಣೆ"- GST ಸುಧಾರಣೆ ಶ್ಲಾಘಿಸಿದ ಪ್ರಧಾನಿ ಮೋದಿ

ಜಿಎಸ್‌ಟಿ ಕಡಿತ ಲಾಭ ಗ್ರಾಹಕರಿಗೆ ವರ್ಗಾಯಿಸುವುದಾಗಿ ಮುಖೇಶ್ ಅಂಬಾನಿ ಭರವಸೆ

ಕನಕಪುರದಲ್ಲಿ ಮೆಡಿಕಲ್ ಕಾಲೇಜ್; ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆಗೆ ಸಂಪುಟ ಅಸ್ತು

ADR report: ದೇಶದಲ್ಲಿ ಶೇ. 47 ರಷ್ಟು ಸಚಿವರ ಮೇಲೆ ಕ್ರಿಮಿನಲ್ ಆರೋಪ, ಬಿಲಿಯನೇರ್ ಪೈಕಿ ಕರ್ನಾಟಕಕ್ಕೆ ಮೊದಲ ಸ್ಥಾನ, ಡಿಕೆಶಿ ಎಷ್ಟನೇ ಶ್ರೀಮಂತ?

ಉಕ್ರೇನ್‌ನಲ್ಲಿ ಶಾಂತಿ ನೆಲೆಸಲು ಭಾರತದ ಮೇಲಿನ 'ಸುಂಕಾಸ್ತ್ರ' ನಿರ್ಣಾಯಕ: US ಸುಪ್ರೀಂ ಕೋರ್ಟ್‌ಗೆ ಡೊನಾಲ್ಡ್ ಟ್ರಂಪ್ ಮಾಹಿತಿ

SCROLL FOR NEXT