ಮಹಿಳೆಯರಿಂದ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಕಾಲು ಮುರಿದುಕೊಂಡ ಆಟೋ ಚಾಲಕ 
ದೇಶ

ದೆಹಲಿ: ಇಬ್ಬರು ಮಹಿಳೆಯರಿಂದ ಆಟೋ ಚಾಲಕನ ಮೇಲೆ ಲೈಂಗಿಕ ದೌರ್ಜನ್ಯ!

ಇಲ್ಲೊಂದು ಘಟನೆಯಲ್ಲಿ ಆಟೋ ಡ್ರೈವರ್ ಮೇಲೆಯೇ ಇಬ್ಬರು ಮಹಿಳೆಯರು ಲೈಂಗಿಕ ದೌರ್ಜನ್ಯ ನಡೆಸಲು ಮುಂದಾಗಿದ್ದಾರೆ!.

ನವದೆಹಲಿ: ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಆಟೋ, ಕ್ಯಾಬ್ ಚಾಲಕನಿಂದ ಮಹಿಳೆಯರ ಮೇಲೆ ಅತ್ಯಾಚಾರ ಪ್ರಕರಣ ನಡೆದಿರುವ ವರದಿಗಳನ್ನು ಕೇಳಿದ್ದೀರಿ. ಆದರೆ ಇಲ್ಲೊಂದು ಘಟನೆಯಲ್ಲಿ ಆಟೋ ಡ್ರೈವರ್ ಮೇಲೆಯೇ ಇಬ್ಬರು ಮಹಿಳೆಯರು ಲೈಂಗಿಕ ದೌರ್ಜನ್ಯ ನಡೆಸಲು ಮುಂದಾಗಿದ್ದಾರೆ!.

ಸಫ್ದರ್ಜಂಗ್ ಎಂಕ್ಲೇವ್ ಗೆ ತೆರಳಲು ಆಟೋ ಹಿಡಿದ ಮಹಿಳೆಯೊಬ್ಬರು, ಆಟೋ ಚಾಲಕನಿಗೆ ತನಗೆ 300 ರೂ ನೀಡಬೇಕೆಂದು, ಮನೆಗೆ ತಲುಪಿದ ನಂತರ ವಾಪಸ್ ನೀಡುವುದಾಗಿಯೂ ಹೇಳಿದ್ದಾಳೆ. ಮನೆ ತಲುಪುತ್ತಿದ್ದಂತೆ ಹಣ ನೀಡುವ ನೆಪದಲ್ಲಿ ಆಟೋ ಚಾಲಕನನ್ನು ಮನೆಯೊಳಗೆ ಬರಲು ಹೇಳಿದ್ದಾಳೆ, ಆಟೋ ಚಾಲಕ ಉಮೇಶ್ ಮನೆಯೊಳಗೆ ಬರುತ್ತಿದ್ದಂತೆಯೇ ಹಣ ನೀಡುವ ಬದಲು ಬಾಗಿಲನ್ನು ಲಾಕ್ ಮಾಡಿದ್ದಾರೆ. ಇದಕ್ಕೂ ಮುನ್ನ ಮನೆಯಲ್ಲಿದ್ದ ಟಾಂಜೇನಿಯಾ ಮೂಲದ ಮಹಿಳೆಯೊಂದಿಗೆ ಸೇರಿ ಆಟೋ ಚಾಲಕನೊಂದಿಗೆ ಬಲವಂತದ ಲೈಂಗಿಕ ಕ್ರಿಯೆ ನಡೆಸಲು ಯತ್ನಿಸಿದ್ದಾಳೆ.

ಇದಕ್ಕೂ ಮುನ್ನ ಮದ್ಯ ಸೇವಿಸುವಂತೆ ಇಬ್ಬರೂ ಮಹಿಳೆಯರು ಉಮೇಶ್ ಗೆ ಒತ್ತಾಯಿಸಿದ್ದಾರೆ. ನಿರಾಕರಿಸಿದ್ದಕ್ಕೆ ಆತನ ಬಟ್ಟೆ ಹರಿದು, ಅತ್ಯಾಚಾರ ನಡೆಸಲು ಯತ್ನಿಸಿದ್ದಾರೆ. ಅಷ್ಟೇ ಅಲ್ಲದೇ ಇದನ್ನು ಮೊಬೈಲ್ ನಲ್ಲಿ ಚಿತ್ರೀಕರಿಸಿದ್ದಾರೆ ಎಂದು ಉಮೇಶ್ ಆರೋಪಿಸಿದ್ದಾರೆ.   

ಈ ಘಟನೆಯಿಂದ ಕಂಗಾಲಾದ ಆಟೋ ಚಾಲಕ ಮೊದಲ ಮಹಡಿಯಲ್ಲಿದ್ದ ಮನೆಯಿಂದ ಜಿಗಿದು, ಮಹಿಳೆಯರಿಂದ ಪಾರಾಗಿದ್ದಾನೆ. ಈ ವೇಳೆ ಆತನ ಎರಡೂ ಕಾಲುಗಳು ಮುರಿದಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ದೆಹಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು ಆಟೋ ಚಾಲಕನ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ಮಹಿಳೆ ಲಾಲ್ವಾನಿಯನ್ನು ಬಂಧಿಸಿದ್ದಾರೆ ಮತ್ತೋರ್ವ ಮಹಿಳೆಯಾ ಬಂಧನಕ್ಕಾಗಿ ಶೋಧಕಾರ್ಯ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT