ಹಣಕಾಸು ಸಚಿವ ಒ.ಪನ್ನೀರ್ ಸೆಲ್ವಂ 
ದೇಶ

ಕರುಣಾನಿಧಿ ಅವರಿಗೆ ರಾಜಕೀಯ ಗಾಂಭೀರ್ಯವಿಲ್ಲ: ಪನ್ನೀರ್ ಸೆಲ್ವಂ

ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಜಯಲಲಿತಾ ಅವರ ಆಪ್ತ ಹಣಕಾಸು ಸಚಿವ ಒ.ಪನ್ನೀರ್ ಸೆಲ್ವಂ...

ಚೆನ್ನೈ:ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರ ಆರೋಗ್ಯದ ಬಗ್ಗೆ ಹೇಳಿಕೆ ನೀಡಿರುವ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಅವರ ವಿರುದ್ಧ ಹರಿಹಾಯ್ದಿರುವ ಜಯಲಲಿತಾ ಅವರ ಆಪ್ತ ಹಣಕಾಸು ಸಚಿವ ಒ.ಪನ್ನೀರ್ ಸೆಲ್ವಂ, ತಮ್ಮ ನಾಯಕಿ ಯಾವತ್ತೂ ರಾಜಕೀಯ ಉದ್ದೇಶಕ್ಕಾಗಿ ಅವರ ಪ್ರತಿಸ್ಪರ್ಧಿಗಳ ಆರೋಗ್ಯದ ಬಗ್ಗೆ ಮಾತನಾಡಿರಲಿಲ್ಲ ಎಂದು ಹೇಳಿದರು.

ಕರುಣಾನಿಧಿ ಅವರಿಗೆ ರಾಜಕೀಯ ಗಂಭೀರತೆ ಬಗ್ಗೆ ಗೊತ್ತಿಲ್ಲವೇ? ಎಂದು ಪ್ರಶ್ನಿಸಿದ ಪನ್ನೀರ್ ಸೆಲ್ವಂ, ಅವರಿಂದ ಅದನ್ನು ನಿರೀಕ್ಷಿಸುವುದು ಕೂಡ ತಪ್ಪಾಗುತ್ತದೆ ಎಂದು ಪಕ್ಷದ ಸಾರ್ವಜನಿಕ ಸಭೆಯೊಂದರಲ್ಲಿ ಹೇಳಿದರು.

ತಮಿಳುನಾಡು ರಾಜ್ಯದ ಜನತೆ ಕರುಣಾನಿಧಿಯವರನ್ನು ಮರೆತಿದ್ದಾರೆ. ಅವರನ್ನು ಮೂಲೆಯಲ್ಲಿ ಕೂರಿಸಿ ಆಗಿದೆ. ಅವರಿಗೆ ಈಗ ಹೇಗಾದರೂ ಮಾಡಿ ಮತ್ತೆ ಅಧಿಕಾರಕ್ಕೆ ಬರಬೇಕೆನ್ನುವ ಆಸೆ ಬಂದಿದೆ. ಅದು ಮಾತ್ರ ಸಾಧ್ಯವಿಲ್ಲ ಎಂದು ಪನ್ನೀರ್ ಸೆಲ್ವಂ ಹೇಳಿದರು.
 
ಮೊನ್ನೆ ಜುಲೈ 7 ರಂದು ಕರುಣಾನಿಧಿ ಅವರು ಸಾರ್ವಜನಿಕ ಸಭೆಯೊಂದರಲ್ಲಿ, ತಮಿಳುನಾಡು ಮುಖ್ಯಮಂತ್ರಿ ಇಲ್ಲದ ರಾಜ್ಯವಾಗಿದೆ. ಜಯಲಲಿತಾ ಅವರು ಅನಾರೋಗ್ಯಕ್ಕೀಡಾಗಿರುವುದರಿಂದ ಅವರು ತಮ್ಮ ಕೆಲಸ ನಿರ್ವಹಿಸುತ್ತಿಲ್ಲ.  ಆದುದರಿಂದ ಅವರು ರಾಜಕೀಯ ಬಿಟ್ಟು ವಿಶ್ರಾಂತಿ ತೆಗೆದುಕೊಳ್ಳಬೇಕು ಎಂದು ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT