ಪ್ರಧಾನಮಂತ್ರಿ ನರೇಂದ್ರ ಮೋದಿ 
ದೇಶ

ಜಮ್ಮು: ರಾಜಕೀಯ ಅಸ್ಪೃಶ್ಯತೆ ವಿರುದ್ಧ ಪ್ರಧಾನಿ ಮೋದಿ ಕಿಡಿ

ಒಂದೆಡೆ ಜಮ್ಮು-ಕಾಶ್ಮೀರ ಗಡಿಯಲ್ಲಿ ಭಾರತ-ಪಾಕ್ ನಡುವಿನ ಸಂಘರ್ಷ ಮುಂದುವರಿಯುತ್ತಿದ್ದರೆ, ಇದ್ಯಾವುದನ್ನೂ ಲೆಕ್ಕಿಸದೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ...

ಜಮ್ಮು: ಗಿರ್‌ಧಾರಿ ಲಾಲ್ ಡೋಗ್ರಾ ಅವರಿಂದ ಅಧಿಕಾರಿಗಳು ಪಾಠ ಕಲಿಯಬೇಕಿದ್ದು, ಯಾರು ಸಾರ್ವಜನಿಕರಿಗಾಗಿ ದುಡಿಯುತ್ತಾರೋ ಅವರನ್ನು ದೇಶ ಎಂದಿಗೂ ಗೌರವಿಸುತ್ತದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ.

ಈ ಕುರಿತಂತೆ ಜಮ್ಮು-ಕಾಶ್ಮೀರದ ಸಚಿವ ಹಾಗೂ ಸಂಸದರಾಗಿದ್ದ ಡಿ.ಗಿರ್‌ಧಾರಿ ಲಾಲ್ ಡೋಗ್ರಾ ಅವರ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,  ರಾಜಕೀಯ ರಂಗದಲ್ಲಿ ಕೆಲವು ವ್ಯಕ್ತಿಗಳಷ್ಟೇ ಸತ್ತನಂತರವೂ ಅವರು ಬದುಕಿರುವಂತೆಯೇ ಭಾಸವಾಗುತ್ತದೆ. ಗಿರ್‌ಧಾರಿ ಲಾಲ್ ಡೋಗ್ರಾ ಅವರ ರಾಜಕೀಯ ಅವಧಿಯಲ್ಲಿದ್ದ ಅಧಿಕಾರಿಗಳಾರು ಅಧಿಕಾರಕ್ಕಾಗಲಿ ಅಥವಾ ಹಣಕ್ಕಾಗಲಿ ಕೆಲಸ ಮಾಡುತ್ತಿರಲಿಲ್ಲ. ದೇಶದ ಅಭಿವೃದ್ಧಿಗಾಗಿ ಜನರ ಸೇವೆಯೇ ದೇವರ ಸೇವೆ ಎಂದು ಕೆಲಸ ಮಾಡುತ್ತಿದ್ದರು. ದೇಶಕ್ಕಾಗಿ ಗಿರ್‌ಧಾರಿ ಲಾಲ್ ಮಾಡಿದ ಸೇವೆಯನ್ನು ಎಲ್ಲರೂ ಸ್ಮರಿಸಬೇಕಿದ್ದು, ಅವರಿಂದ ಪಾಠ ಕಲಿಯಬೇಕಿದೆ. ಯಾರು ಸಾರ್ವಜನಿಕರ ಜೀವನಕ್ಕಾಗಿ ದುಡಿಯುತ್ತಾರೆಯೋ ಅವರನ್ನು ದೇಶ ಎಂದಿಗೂ ಸ್ಮರಿಸುತ್ತದೆ ಮತ್ತು ಗೌರವಿಸುತ್ತದೆ ಎಂದು ಹೇಳಿದರು.

ಇದಕ್ಕೂ ಮುನ್ನ, ಇಂದು ಬೆಳಿಗ್ಗೆ 11 ರ ಸುಮಾರಿಗೆ ಜಮ್ಮು ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಗವರ್ನರ್ ಎನ್.ಎನ್. ವೊಹ್ರಾ, ಮುಖ್ಯಮಂತ್ರಿ ಮುಫ್ತಿ ಮಹಮ್ಮದ್ ಸಯ್ಯೀದ್ ಹಾಗೂ ಕ್ಯಾಬಿನೆಟ್ ಮಂತ್ರಿಗಳು ಸ್ವಾಗತಿಸಿದರು.

ಜಮ್ಮು-ಕಾಶ್ಮೀರದ ಸಚಿವ ಹಾಗೂ ಸಂಸದರಾಗಿದ್ದ ಡಿ. ಗಿರ್‌ಧಾರಿ ಲಾಲ್ ಡೋಗ್ರಾ ಅವರ ಜನ್ಮ ಶತಮಾನೋತ್ಸವದಲ್ಲಿ ಭಾಗವಹಿಸಲು ಮೋದಿ ಇಂದು ಜಮ್ಮುವಿಗೆ ಭೇಟಿ ನೀಡಿದ್ದು, ಇಫ್ತಾರ್ ಕೊಡುಗೆಯಾಗಿ ರಾಜ್ಯದ ಅಭಿವೃದ್ಧಿಗೆ 70 ಸಾವಿರ ಕೋಟಿ ರೂ. ಪ್ಯಾಕೇಜ್ ಪ್ರಕಟಿಸುವ ನಿರೀಕ್ಷೆಯಿದೆ ಎಂದು ಹೇಳಲಾಗುತ್ತಿದೆ.

ಡೋಗ್ರಾ ಅವರು ಕಥುವಾ ಜಿಲ್ಲೆಯವರಾಗಿದ್ದು, ವಿತ್ತ ಸಚಿವ ಅರುಣ್ ಜೇಟ್ಲಿ ಅವರ ಪತ್ನಿ ಕೂಡ ಅದೇ ಜಿಲ್ಲೆಯವರು. ಡೋಗ್ರಾ ಜೇಟ್ಲಿ ಅವರ ಮಾವ ಕೂಡ. ಹೀಗಾಗಿ ಜೇಟ್ಲಿ ಅವರನ್ನು ಕೂಡ ಪ್ರಧಾನಿ ಜತೆ ಆಹ್ವಾನಿಸಲಾಗಿದೆ. ಪ್ರಧಾನಿ ಘೋಷಿಸುವ ಅಭಿವೃದ್ಧಿ ಪ್ಯಾಕೇಜ್‌ನಲ್ಲಿ 2014ರ ಪ್ರವಾಹ ಸಂತ್ರಸ್ತರಿಗೆ ಪರಿಹಾರ ಕೂಡ ಒಳಗೊಳ್ಳಲಿದೆ. ಪಿಡಿಪಿ-ಬಿಜೆಪಿ ಸರಕಾರದ ಮುಖ್ಯ ಭರವಸೆಯಾದ ಪುನರ್ವಸತಿ ಮತ್ತು ಅಭಿವೃದ್ಧಿಗೆ ಸಹ ಈ ಹಣ ಬಳಕೆಯಾಗಲಿದೆ ಎನ್ನಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT