ರವಿಶಂಕರ ಗುರೂಜಿ 
ದೇಶ

ರವಿಶಂಕರ ಗುರೂಜಿಗೆ ತಾಲಿಬಾನ್ ರಿಂದ ಜೀವ ಬೆದರಿಕೆ?

ಧಾರ್ಮಿಕ ಗುರು ರವಿಶಂಕರ ಗುರೂಜಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ತಾನಿಬಾನ್ ನಿಂದ ಜೀವಬೆದರಿಕೆ ಬಂದಿದೆ ಎಂದು ವರದಿಯಾಗಿದೆ...

ನವದೆಹಲಿ: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸ್ಥಾಪಕ, ಧಾರ್ಮಿಕ ಗುರು ರವಿಶಂಕರ ಗುರೂಜಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ತಾನಿಬಾನ್ ನಿಂದ ಜೀವಬೆದರಿಕೆ ಬಂದಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

 ತಾಲಿಬಾನ್ ಸಂಘಟನೆ ಆರ್ಟ್ ಆಫ್ ಲೀವಿಂಗ್ ಕೇಂದ್ರಕ್ಕೆ ಎರಡು ಪತ್ರಗಳನ್ನು ಕಳುಹಿಸಿದ್ದು, ರವಿಶಂಕರ ಗುರೂಜಿ ಮತ್ತು ಅವರ ಅನುಯಾಯಿಗಳನ್ನು ಗುರಿಯಾಗಿಟ್ಟು ಬಾಂಬ್ ಸ್ಪೋಟ ಮಾಡುವುದಾಗಿ ಎಚ್ಚರಿಕೆ ನೀಡಿದೆ ಎಂದು ವರದಿ ತಿಳಿಸಿದೆ.

ಬೆದರಿಕೆ ಹಿನ್ನೆಲೆಯಲ್ಲಿ, ರವಿಶಂಕರ ಗುರೂಜಿ ಅವರ ಭದ್ರತೆಯನ್ನು ಮತ್ತು ತಾಲಿಬಾನ್ ಕಳುಹಿಸಿರುವ ಪತ್ರವನ್ನು ಪರಿಶೀಲಿಸುವಂತೆ  ಗೃಹ ಸಚಿವಾಲಯ ಅಧಿಕಾರಿಗಳಿಗೆ ಆದೇಶ ನೀಡಿದೆ.

 2012ರಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಹತ್ತಿರ ಆರ್ಟ್ ಆಫ್ ಲೀವಿಂಗ್ ಕೇಂದ್ರದ ಶಾಖೆಯನ್ನು ಆರಂಭಗೊಂಡಿತ್ತು. ಆ ಸಮಯದಲ್ಲಿ ರವಿಶಂಕರ ಗುರೂಜಿ  ಅಲ್ಲಿ ಶಾಂತಿ ಸ್ಥಾಪನೆ ಪ್ರಯತ್ನವಾಗಿ ತಾಲಿಬಾನರನ್ನು ಮಾತುಕತೆಗೆ ಕರೆದಿದ್ದರು.  ಕಳೆದ ವರ್ಷ ಉಗ್ರರು ಆರ್ಟ್ ಆಫ್ ಲೀವಿಂಗ್ ಕೇಂದ್ರಕ್ಕೆ ಬೆಂಕಿ ಹಚ್ಚಿದ್ದರು.

ಕಳೆದ ಮಾರ್ಚ್ ತಿಂಗಳಿನಲ್ಲಿ ರವಿಶಂಕರ ಗುರೂಜಿ ಮಲೇಷ್ಯಾದಲ್ಲಿ ಪ್ರವಾಸ  ಮಾಡುತ್ತಿದ್ದ ಸಂದರ್ಭದಲ್ಲಿ ಐಎಸ್ ಐಎಸ್ ಉಗ್ರಗಾಮಿ ಸಂಘಟನೆಯಿಂದಲೂ ಬೆದರಿಕೆ ಕರೆ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT