ರವಿಶಂಕರ ಗುರೂಜಿ 
ದೇಶ

ರವಿಶಂಕರ ಗುರೂಜಿಗೆ ತಾಲಿಬಾನ್ ರಿಂದ ಜೀವ ಬೆದರಿಕೆ?

ಧಾರ್ಮಿಕ ಗುರು ರವಿಶಂಕರ ಗುರೂಜಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ತಾನಿಬಾನ್ ನಿಂದ ಜೀವಬೆದರಿಕೆ ಬಂದಿದೆ ಎಂದು ವರದಿಯಾಗಿದೆ...

ನವದೆಹಲಿ: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಸ್ಥಾಪಕ, ಧಾರ್ಮಿಕ ಗುರು ರವಿಶಂಕರ ಗುರೂಜಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ತಾನಿಬಾನ್ ನಿಂದ ಜೀವಬೆದರಿಕೆ ಬಂದಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ.

 ತಾಲಿಬಾನ್ ಸಂಘಟನೆ ಆರ್ಟ್ ಆಫ್ ಲೀವಿಂಗ್ ಕೇಂದ್ರಕ್ಕೆ ಎರಡು ಪತ್ರಗಳನ್ನು ಕಳುಹಿಸಿದ್ದು, ರವಿಶಂಕರ ಗುರೂಜಿ ಮತ್ತು ಅವರ ಅನುಯಾಯಿಗಳನ್ನು ಗುರಿಯಾಗಿಟ್ಟು ಬಾಂಬ್ ಸ್ಪೋಟ ಮಾಡುವುದಾಗಿ ಎಚ್ಚರಿಕೆ ನೀಡಿದೆ ಎಂದು ವರದಿ ತಿಳಿಸಿದೆ.

ಬೆದರಿಕೆ ಹಿನ್ನೆಲೆಯಲ್ಲಿ, ರವಿಶಂಕರ ಗುರೂಜಿ ಅವರ ಭದ್ರತೆಯನ್ನು ಮತ್ತು ತಾಲಿಬಾನ್ ಕಳುಹಿಸಿರುವ ಪತ್ರವನ್ನು ಪರಿಶೀಲಿಸುವಂತೆ  ಗೃಹ ಸಚಿವಾಲಯ ಅಧಿಕಾರಿಗಳಿಗೆ ಆದೇಶ ನೀಡಿದೆ.

 2012ರಲ್ಲಿ ಪಾಕಿಸ್ತಾನದ ರಾಜಧಾನಿ ಇಸ್ಲಾಮಾಬಾದ್ ಹತ್ತಿರ ಆರ್ಟ್ ಆಫ್ ಲೀವಿಂಗ್ ಕೇಂದ್ರದ ಶಾಖೆಯನ್ನು ಆರಂಭಗೊಂಡಿತ್ತು. ಆ ಸಮಯದಲ್ಲಿ ರವಿಶಂಕರ ಗುರೂಜಿ  ಅಲ್ಲಿ ಶಾಂತಿ ಸ್ಥಾಪನೆ ಪ್ರಯತ್ನವಾಗಿ ತಾಲಿಬಾನರನ್ನು ಮಾತುಕತೆಗೆ ಕರೆದಿದ್ದರು.  ಕಳೆದ ವರ್ಷ ಉಗ್ರರು ಆರ್ಟ್ ಆಫ್ ಲೀವಿಂಗ್ ಕೇಂದ್ರಕ್ಕೆ ಬೆಂಕಿ ಹಚ್ಚಿದ್ದರು.

ಕಳೆದ ಮಾರ್ಚ್ ತಿಂಗಳಿನಲ್ಲಿ ರವಿಶಂಕರ ಗುರೂಜಿ ಮಲೇಷ್ಯಾದಲ್ಲಿ ಪ್ರವಾಸ  ಮಾಡುತ್ತಿದ್ದ ಸಂದರ್ಭದಲ್ಲಿ ಐಎಸ್ ಐಎಸ್ ಉಗ್ರಗಾಮಿ ಸಂಘಟನೆಯಿಂದಲೂ ಬೆದರಿಕೆ ಕರೆ ಬಂದಿದ್ದನ್ನು ಇಲ್ಲಿ ಸ್ಮರಿಸಬಹುದು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

2nd Test, Day 3: ಮೊದಲ ಇನ್ನಿಂಗ್ಸ್ ನಲ್ಲಿ 248 ರನ್ ಗೆ ವಿಂಡೀಸ್ ಆಲೌಟ್, ಫಾಲೋಆನ್ ಹೇರಿದ ಭಾರತ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

SCROLL FOR NEXT