ಸೀತಾರಾಮ ಯೆಚೂರಿ 
ದೇಶ

ನರೇಂದ್ರ ಮೋದಿ ಮೌನೇಂದ್ರ ಮೋದಿ ಆಗುತ್ತಿದ್ದಾರೆ: ಸಿಪಿಐ ಟೀಕೆ

ಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಮೌನೇಂದ್ರ ಮೋದಿ ಆಗುತ್ತಿದ್ದಾರೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ವ್ಯಂಗ್ಯವಾಡಿದ್ದಾರೆ...

ನವದೆಹಲಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಇತ್ತೀಚೆಗೆ ಮೌನೇಂದ್ರ ಮೋದಿ ಆಗುತ್ತಿದ್ದಾರೆ ಎಂದು ಸಿಪಿಐ ಪ್ರಧಾನ ಕಾರ್ಯದರ್ಶಿ ಸೀತಾರಾಮ ಯೆಚೂರಿ ವ್ಯಂಗ್ಯವಾಡಿದ್ದಾರೆ.

2014 ರ ಲೋಕಸಭೆ ಚುನಾವಣೆ ವೇಳೆ ತಮ್ಮ ಭಾಷಣದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ನರೇಂದ್ರ ಮೋದಿ ಮನಮೌನ ಸಿಂಗ್ ಎಂದು ಲೇವಡಿ ಮಾಡುತ್ತಿದ್ದರು. ಆದರೆ ಈಗ ನರೇಂದ್ರ ಮೋದಿ ಅವರೇ ಮೌನೇಂದ್ರ ಮೋದಿ ಆಗುತ್ತಿದ್ದಾರೆ ಎಂದು ಹೇಳಿದ್ದಾರೆ.

 ಲಲಿತ್ ಮೋದಿ ಪ್ರಕರಣದಲ್ಲಿ ಸಚಿವೆ ಸುಷ್ಮಾ ಸ್ವರಾಜ್ ಹಾಗೂ ರಾಜಸ್ತಾನ ಮುಖ್ಯಮಂತ್ರಿ ವಸುಂದರಾ ರಾಜೇ ಹೆಸರು ಕೇಳಿಬರುತ್ತಿದ್ದರೂ ಪ್ರಧಾನಿ ಮೋದಿ ಇದುವರೆಗೂ ಪ್ರಕರಣ ಸಂಬಂಧ ಎಲ್ಲಿಯೂ ಪ್ರತಿಕ್ರಿಯೆ ನೀಡಿಲ್ಲ. ಒಂದು ವೇಳೆ ಪ್ರಕರಣದಲ್ಲಿ ಈ ಇಬ್ಬರ ಪಾತ್ರ ಇಲ್ಲ ಎಂದಾದರೇ ಮೋದಿ ಯಾವುದೇ ತನಿಖೆಗೆ ವಹಿಸುತ್ತಿಲ್ಲ ಏಕೆ ಎಂದು ಪ್ರಶ್ನಿಸಿದರು.

ಲಲಿತ್ ಮೋದಿ ಪ್ರಕರಣ ಸೇರಿದಂತೆ ಯಾವುದೇ ವಿಷಯಗಳನ್ನು  ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ ಎಂದು ಅವರು ಆರೋಪಿಸಿದರು

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT