ಸಾಂದರ್ಭಿಕ ಚಿತ್ರ 
ದೇಶ

ಸರಣಿ ಅತ್ಯಾಚಾರಿಯಿಂದ 30 ಮಕ್ಕಳ ಕಗ್ಗೊಲೆ: ದೆಹಲಿ ಪೊಲೀಸ್

ಬಂಧಿತ ಸೀರಿಯಲ್ ರೇಪಿಸ್ಟ್ 30 ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ಕೊಂದಿದ್ದಾನೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ...

ನವದೆಹಲಿ: ಬಂಧಿತ ಸೀರಿಯಲ್ ರೇಪಿಸ್ಟ್ 30 ಮಕ್ಕಳಿಗೆ ಲೈಂಗಿಕ ಕಿರುಕುಳ ನೀಡಿ ಕೊಂದಿದ್ದಾನೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.

24 ವರ್ಷದ ರವಿಂದರ್ ಕುಮಾರ್ ದೆಹಲಿಯಲ್ಲಿ ಇಂತ ಹೀನಾಯ ಕೃತ್ಯ ನಡೆಸಿರುವುದಾಗಿ ಪೊಲೀಸರಿಗೆ ವಿಚಾರಣೆ ವೇಳೆ ತಿಳಿಸಿದ್ದಾನೆ ಎಂದು ದೆಹಲಿ ಪೊಲೀಸ್ ಉಪ ಆಯುಕ್ತ ವಿಕ್ರಮ್ ಜಿತ್ ಸಿಂಗ್ ಹೇಳಿದ್ದಾರೆ.

ಮಕ್ಕಳಿಗೆ ಸಿಹಿತಿಂಡಿ ಮತ್ತು ಹಣದ ಆಮೀಷವೊಡ್ಡಿ ಕರೆದೊಯ್ಯುತ್ತಿದ್ದ ಕಾಮುಕ ರವೀಂದರ್ ಕುಮಾರ್ ಇದುವರೆಗೂ ದೆಹಲಿಯಲ್ಲಿ 30 ಮಕ್ಕಳನ್ನು ಕೊಂದಿರುವುದಾಗಿ ಹೇಳಿದ್ದಾನೆ.

ಬಸ್ ಕ್ಲೀನರ್ ಆಗಿ  ಕೆಲಸ ಮಾಡುತ್ತಿರುವ ರವೀಂದರ್ ಕುಮಾರ್ ಅತಿಯಾಗಿ ಮದ್ಯ ಸೇವಿಸಿದಾಗ ತಾನು ನಿಯಂತ್ರಣ ಕಳೆದುಕೊಂಡು ಮೃಗದ ರೀತಿ ವರ್ತಿಸುತ್ತಿದ್ದೆ ಎಂದು ತಿಳಿಸಿದ್ದಾನೆ.

ಕಳೆದ ವರ್ಷ ಬಿಗಂಪುರದ ಬಾಲಕನನ್ನು ಅಪಹರಿಸಿ, ಆತನ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ನಂತರ ಕತ್ತು ಸೀಳಿದ್ದ. ಬಾಲಕ ಮೃತಪಟ್ಟಿದ್ದಾನೆಂದು ಭಾವಿಸಿ ನಿರ್ಮಾಣ ಹಂತದ ಕಟ್ಟಡವೊಂದರ ಬಳಿ ಬಿಸಾಡಿ ಹೋಗಿದ್ದ. ಆದರೆ ಬದುಕುಳಿದ ಬಾಲಕ ಪೊಲೀಸರಿಗೆ ದೂರು ನೀಡಿದ್ದ ಹಿನ್ನೆಲೆಯಲ್ಲಿ ಆತನನ್ನು ಬಂಧಿಸಲಾಗಿತ್ತು.

ಆದರೆ ಈ ಪ್ರಕರಣದಲ್ಲಿ ಕುಮಾರ್  ಜಾಮೀನಿನ ಮೇಲೆ ಹೊರಬಂದಿದ್ದ. ಪೊಲೀಸರಿಗೆ ಈತನ ಪೂರ್ವಾಪರ ಗೊತ್ತಿಲ್ಲದ ಕಾರಣ ಆತನನ್ನು ಬಿಡುಗಡೆಗೊಳಿಸಿದ್ದರು.

ಮತ್ತೆ ತನ್ನ ಚಾಳಿ ಮುಂದುವರಿಸಿದ ಕುಮಾರ್ ಬಿಗಂಪುರದಲ್ಲಿ ಆರು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಪ್ರಕರಣದಲ್ಲಿ ಜುಲೈ 16 ರಂದು ಕುಮಾರ್ ಕುಮಾರ್ ನನ್ನು  ಬಂಧಿಸಿ ವಿಚಾರಣೆಗೊಳಪಡಿಸಿದಾಗ 30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ ಕೊಂದಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

ಶಿಬು ಸೊರೇನ್ 'ರಾಜ್ಯದ ಪಿತಾಮಹ' ಎಂದು ಘೋಷಿಸುವಂತೆ ಜೆಎಂಎಂ ಆಗ್ರಹ

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

SCROLL FOR NEXT