ಬಿಜೆಪಿ ಪಕ್ಷದ ಹಿಮಾಚಲಪ್ರದೇಶದ ಮಾಜಿ ಮುಖ್ಯಮಂತ್ರಿ ಶಾಂತಕುಮಾರ್ 
ದೇಶ

ನಾನು ಬರೆದಿದ್ದನ್ನು ಸಮರ್ಥಿಸಿಕೊಳ್ಳುತ್ತೇನೆ; ವ್ಯಾಪಂ ಬಗ್ಗೆ ಶಾಂತಕುಮಾರ್

ವ್ಯಾಪಂ ಹಗರಣ ಬಿಜೆಪಿ ಪಕ್ಷದ ಹೆಸರಿಗೆ ಮಸಿಬಳಿದಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರಿಗೆ ಬರೆದ ಪತ್ರವನ್ನು ನಾನು ಸಮರ್ಥಿಸಿಕೊಳ್ಳುತ್ತೇನೆ ಎಂದು

ನವದೆಹಲಿ: ವ್ಯಾಪಂ ಹಗರಣ ಬಿಜೆಪಿ ಪಕ್ಷದ ಹೆಸರಿಗೆ ಮಸಿಬಳಿದಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ಅವರಿಗೆ ಬರೆದ ಪತ್ರವನ್ನು ನಾನು ಸಮರ್ಥಿಸಿಕೊಳ್ಳುತ್ತೇನೆ ಎಂದು ಮಂಗಳವಾರ ಹಿಮಾಚಲಪ್ರದೇಶದ ಮಾಜಿ ಮುಖ್ಯಮಂತ್ರಿ ಶಾಂತಕುಮಾರ್ ತಿಳಿಸಿದ್ದಾರೆ.

"ಭಾರತೀಯ ಜನತಾ ಪಕ್ಷದ ಪಯಣ ಸುಧೀರ್ಘವಾದದ್ದು ಮತ್ತು ಈ ಸಮಯದಲ್ಲಿ ಪಕ್ಷ ಬಹಳಷ್ಟು ಸಾಧಿಸಿದೆ ಮತ್ತು ಸದಸ್ಯರಿಗೆ ಹೆಮ್ಮೆ ತಂದಿದೆ. ಆದರೆ ಇಂತಹ ಘಟನೆಗಳು ನಡೆದರೆ ಇದು ಪಕ್ಷಕ್ಕೆ ಮಸಿ ಬಳಿದು ಸದಸ್ಯರ ಆತ್ಮವಿಶ್ವಾಸವನ್ನು ಕುಂದಿಸುತ್ತದೆ" ಎಂದು ವ್ಯಾಪಂ ಹಗರಣದ ಬಗ್ಗೆ ವರದಿಗಾರರೊಂದಿಗೆ ಶಾಂತಕುಮಾರ್ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

"ಪತ್ರದಲ್ಲಿ ನನ್ನ ನಿಲುವುಗಳನ್ನು ವ್ಯಕ್ತಪಡಿಸಿದ್ದೇನೆ ಮತ್ತು ನಾನು ಬರೆದಿರುವುದಕ್ಕೆ ಬದ್ಧನಾಗಿದ್ದೇನೆ" ಎಂದು ಅವರು ಹೇಳಿದ್ದಾರೆ.

ಷಾ ಅವರಿಗೆ ಹಿಂದಿಯಲ್ಲಿ ಬರೆದ ಪತ್ರವನ್ನು ತಮ್ಮ ಫೇಸ್ಬುಕ್ ಮತ್ತು ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದರು. ಇಂತಹ ಹಗರಣಗಳು ಪಕ್ಷದ ಸದಸ್ಯರನ್ನು ತಲೆ ತಗ್ಗಿಸುವಂತೆ ಮಾಡಿವೆ ಎಂದು ಅವರು ಹೇಳಿದ್ದರು.

ಬಿಜೆಪಿ ಆಡಳಿತದ ಮಧ್ಯಪ್ರದೇಶದ ಸರ್ಕಾರಿ ನೇಮಕಾತಿಗಳಲ್ಲಿ ಆಗಿರುವ ವ್ಯಾಪಕ ಭ್ರಷ್ಟಾಚಾರದ ತನಿಖೆಯನ್ನು ಸಿ ಬಿ ಐ ನಡೆಸುತ್ತಿದೆ. ಈ ಹಗರಣಕ್ಕೆ ಸಂಬಧಪಟ್ಟಂತೆ ಇಲ್ಲಿಯವರೆಗೆ ೪೫ಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT