ಪತಿ ಐಪಿಎಸ್ ಅಧಿಕಾರಿ ಸಂತೋಷ್ ಕುಮಾರ್ ವಿರುದ್ಧ ಪ್ರಕರಣ ದಾಖಲಿಸಿ ಡಿಜಿಪಿ ಕಚೇರಿಯಿಂದ ಹೊರಬರುತ್ತಿರುವ ಮೇಘನಾ 
ದೇಶ

ಅಧಿಕಾರಿ ವಿರುದ್ಧವೇ ವರದಕ್ಷಿಣೆ ಕಿರುಕುಳ ಪ್ರಕರಣ ದಾಖಲಿಸಿದ ಪತ್ನಿ

ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಚೆನ್ನೈನ ಐಪಿಎಸ್ ಅಧಿಕಾರಿ ಸಂತೋಷ್ ಕುಮಾರ್ ವಿರುದ್ಧ ಅವರ ಪತ್ನಿ ವರದಕ್ಷಿಣ ಕಿರುಕುಳ ಪ್ರಕರಣ ದಾಖಲಿಸಿರುವುದಾಗಿ ಮಂಗಳವಾರ ತಿಳಿದುಬಂದಿದೆ...

ಚೆನ್ನೈ: ವರದಕ್ಷಿಣೆ ಕಿರುಕುಳ ಆರೋಪದ ಮೇಲೆ ಚೆನ್ನೈನ ಐಪಿಎಸ್ ಅಧಿಕಾರಿ ಸಂತೋಷ್ ಕುಮಾರ್ ವಿರುದ್ಧ ಅವರ ಪತ್ನಿ ವರದಕ್ಷಿಣ ಕಿರುಕುಳ ಪ್ರಕರಣ ದಾಖಲಿಸಿರುವುದಾಗಿ ಮಂಗಳವಾರ ತಿಳಿದುಬಂದಿದೆ.

ಈ ಕುರಿತಂತೆ ಮಾತನಾಡಿರುವ ಐಪಿಎಸ್ ಅಧಿಕಾರಿ ಪತ್ನಿ ಮೇಘನಾ, ನನ್ನ ಪತಿ ಸಂತೋಷ್ ಕುಮಾರ್ ರೊಂದಿಗೆ 2014 ರಲ್ಲಿ ವಿವಾಹವಾಗಿದ್ದೆ. ವಿವಾಹವಾಗಿದ್ದಾಗಿನಿಂದಲೂ ಸಂತೋಷ್ ಕುಮಾರ್ ಹಾಗೂ ಅವರ ಅಪ್ಪ, ಅಮ್ಮ ಮೂವರೂ ಸೇರಿ ಕಿರುಕುಳ ನೀಡುತ್ತಿದ್ದರು. ದಿನಕ್ಕೆ ಎರಡು ಬಾರಿ ಊಟ ನೀಡುತ್ತಿದ್ದರಲ್ಲದೇ, ದೈಹಿಕ ಹಾಗೂ ಮಾನಸಿಕವಾಗಿ ನೋವುಂಟು ಮಾಡುತ್ತಿದ್ದರು. ನನಗೀಗ 9 ವರ್ಷದ ಮಗನಿದ್ದು, ಮಗನನ್ನು ಸಾಕುವ ಸಲುವಾಗಿ ಕಾಲೇಜುಗಳಲ್ಲಿ ಪಾರ್ಟ್ ಟೈಮ್ ಕೆಲಸ ಮಾಡುತ್ತಿದ್ದೇನೆ.

ಪತಿ ಹಾಗೂ ಮನೆಯ ಕಿರುಕುಳ ತಾಳಲಾರದೇ ಈಗಾಗಲೇ ಎರಡು ಬಾರಿ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದೆ. ಈ ಬಗ್ಗೆ ಉಪ ಆಯುಕ್ತರ ಬಳಿಯೂ ಮಾತನಾಡಿ ಪ್ರತಿಯೊಂದು ವಿಷಯವನ್ನು ಪತ್ರದಲ್ಲಿ ಬರೆದು ದೂರು ನೀಡಿದ್ದೆ. ಈ ಬಗ್ಗೆ ಅಧಿಕಾರಿಗಳು ಸಂತೋಷ ಕುಮಾರ್ ವಿರುದ್ಧ ಕಠಿಣ ಕ್ರಮಕೈಗೊಳ್ಳುತ್ತಾರೆಂದುಕೊಂಡಿದ್ದೆ. ಆದರೆ, ಅಧಿಕಾರಿಗಳು ಪ್ರಕರಣ ಕುರಿತಂತೆ ನಡೆದುಕೊಂಡ ರೀತಿ ಸಾಕಷ್ಟು ನೋವು ಮಾಡಿದೆ. ಐಪಿಎಸ್ ಅಧಿಕಾರಿಯಾಗಿ ಕುರ್ಚಿಯಲ್ಲಿ ಕುಳಿತುಕೊಳ್ಳುವ ಅರ್ಹತೆ ಸಂತೋಷ್ ಕುಮಾರ್ ಗೆ ಇಲ್ಲ. ಇದೀಗ ಸಂತೋಷ್ ಕುಮರ್ ಮರು ವಿವಾಹವಾಗುತ್ತಿದ್ದು,  ಪ್ರಕರಣವನ್ನು ಸಿಬಿ ಸಿಐಡಿ ಅಧಿಕಾರಿಗಳು ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ಯಾವುದೇ ಸಂಪರ್ಕ ಕಡಿತಗೊಳ್ಳದೇ ಎಲ್ಲಾ ಇ-ಮೇಲ್ ಗಳನ್ನು Gmail ನಿಂದ Zoho Mail ಗೆ ವರ್ಗಾವಣೆ ಮಾಡುವುದು ಹೇಗೆ? ಸಿಗುವ ಸೌಲಭ್ಯಗಳೇನು? ಇಲ್ಲಿದೆ ಮಾಹಿತಿ

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

SCROLL FOR NEXT