ದೇಶ

ಶ್ರೀಕೃಷ್ಣ ದೇಗುಲಕ್ಕೆ ಬಾಂಬ್ ಬೆದರಿಕೆ

Mainashree

ತ್ರಿಶೂರ್: ಕೇರಳದ ಗುರುವಾಯೂರುನಲ್ಲಿರುವ ಶ್ರೀಕೃಷ್ಣ ದೇವಾಲಯಕ್ಕೆ ಮಂಗಳವಾರ ಬಾಂಬ್ ಬೆದರಿಕೆ ಕರೆ ಬಂದಿದೆ.

ಮುಂದಿನ 24 ಗಂಟೆಗಳಲ್ಲಿ ದೇವಾಲಯದಲ್ಲಿ ಭಾರಿ ಸ್ಫೋಟ ನಡೆಯಲಿದೆ ಎಂದು ಅಪರಿಚಿತ ವ್ಯಕ್ತಿಯೊಬ್ಬರು ಪೊಲೀಸರಿಗೆ ಕರೆ ಮಾಡಿ ತಿಳಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ದೇವ ಸ್ಥಾನದಲ್ಲಿ ಹೈ ಅಲರ್ಟ್ ಘೋಷಿಸಲಾಗಿದೆ. ಕರೆ ಬಂದಿರುವುದು ಮಧ್ಯ ಪ್ರಾಚ್ಯ ರಾಷ್ಟ್ರದಿಂದ ಎಂದಿರುವ ಪೊಲೀಸರು, ಕರೆ ಬಂದೊಡನೆ ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳವನ್ನು ದೇವಸ್ಥಾನಕ್ಕೆ ಕರೆಸಿ ತಪಾಸಣೆ ನಡೆಸಲಾಗಿದೆ ಎಂದಿದ್ದಾರೆ.

SCROLL FOR NEXT