ಯಾಕೂಬ್ ಮೆಮನ್‌ 
ದೇಶ

ಯಾಕೂಬ್ ಮೆಮನ್‌ಗೆ ಗಲ್ಲು ಬೇಡ: ಸಿಪಿಐ(ಎಂ)

1993ರಲ್ಲಿ ನಡೆದ ಮುಂಬೈ ಬಾಂಬ್ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ನ್ನು ಗಲ್ಲಿಗೇರಿಸುವುದರ ವಿರುದ್ಧ ಸಿಪಿಎಂ ಕಣಕ್ಕಿಳಿದಿದೆ. ಮೆಮನ್‌ನ್ನ...

ನವದೆಹಲಿ:  1993ರಲ್ಲಿ ನಡೆದ ಮುಂಬೈ ಬಾಂಬ್ ಸ್ಫೋಟದ ಅಪರಾಧಿ ಯಾಕೂಬ್ ಮೆಮನ್‌ನ್ನು ಗಲ್ಲಿಗೇರಿಸುವುದರ ವಿರುದ್ಧ ಸಿಪಿಎಂ ಕಣಕ್ಕಿಳಿದಿದೆ. ಮೆಮನ್‌ನ್ನ ದಯಾ ಅರ್ಜಿಯನ್ನು ಸ್ವೀಕರಿಸಿ ಆತನಿಗೆ ಜೀವಾವಧಿ ಶಿಕ್ಷೆ ನೀಡಬೇಕೆಂದು ಸಿಪಿಐ (ಎಂ) ಪಾಲಿಟ್ ಬ್ಯೂರೋ ತಮ್ಮ ಹೇಳಿದೆ.

ಮೆಮನ್‌ಗೆ ಗಲ್ಲು ಶಿಕ್ಷೆ ವಿಧಿಸಬಾರದು ಎಂಬ ನಿಲುವು ಸಿಪಿಎಂ ಪಾಲಿಟ್ ಬ್ಯುರೋ ಸ್ವೀಕರಿಸಿರುವುದಾಗಿ ತಮ್ಮ ಪ್ರಕಟಣೆಯಲ್ಲಿ ತಿಳಿಸಲಾಗಿದೆ.  257 ಜನರ ಸಾವಿಗೆ ಕಾರಣವಾದ ಭಯೋತ್ಪಾದಕ ಕೃತ್ಯವಾಗಿತ್ತು ಮುಂಬೈನಲ್ಲಿ ನಡೆದದ್ದು. ಅದಕ್ಕೆ ಕಾರಣರಾದವರನ್ನು ಕಾನೂನು ವಿಚಾರಣೆಗೊಳಪಡಿಸಿ ಶಿಕ್ಷೆಗೊಳಪಡಿಸಬೇಕು. ಆದರೆ ಈ ಕೃತ್ಯದ ಹಿಂದಿರುವ ಪ್ರಧಾನ ಆರೋಪಿಗಳೆಲ್ಲಾ ಶಿಕ್ಷೆಯಿಂದ ಪಾರಾಗಿದ್ದಾರೆ.

ವಿದೇಶದಲ್ಲಿರುವ ಅವರನ್ನು ಭಾರತಕ್ಕೆ ಕರೆತಂದು ವಿಚಾರಣೆಗೊಳಪಡಿಸಿ ಶಿಕ್ಷೆ ವಿಧಿಸಬೇಕಾಗಿದೆ .ಈ ಹೊತ್ತಲ್ಲಿ ಯಾಕೂಬ್ ಮೆಮನ್‌ನ್ನು ಗಲ್ಲಿಗೇರಿಸುವುದು ಸರಿಯಲ್ಲ. ಕೃತ್ಯಕ್ಕೆ ಸಂಚು ರೂಪಿಸಿದವನು ಯಾಕೂಬ್. ಆತ ಶರಣಾಗತಿಯಾಗಿ ತಪ್ಪೊಪ್ಪಿಕೊಂಡಿದ್ದಾನೆ.  ಹೀಗಿರುವಾಗ ಅವನನ್ನು ಗಲ್ಲಿಗೇರಿಸುವುದು ಸರಿಯಲ್ಲ ಎಂದು ಸಿಪಿಐ (ಎಂ) ಅಭಿಪ್ರಾಯಪಟ್ಟಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT