ಅಡ್ವಾಣಿ(ಸಂಗ್ರಹ ಚಿತ್ರ) 
ದೇಶ

ಅಡ್ವಾಣಿ 1999 ರ ಉಗ್ರರ ಬಿಡುಗಡೆ ಪರವಾಗಿರಲಿಲ್ಲ: ಫಾರೂಕ್ ಅಬ್ದುಲ್ಲಾ

1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ- ಫಾರೂಕ್ ಅಬ್ದುಲ್ಲಾ

ನವದೆಹಲಿ: 1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅಬ್ದುಲ್ಲಾ, ಅಡ್ವಾಣಿ ಉಗ್ರರ ಬಿಡುಗಡೆ ಮಾಡುವ ಪರವಾಗಿರಲಿಲ್ಲ, ಬಹುಶಃ ಅವರನ್ನು  ಒತ್ತಡ ಹೇರಿ ಒಪ್ಪಿಸಲಾಗಿತ್ತು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿಕೆ ನೀಡಿದ್ದಾರೆ.ಪ್ರಾಮಾಣಿಕವಾಗಿ ಹೇಳಬೇಕೆಂದರೆ ಉಗ್ರರನ್ನು ಬಿಡುಗಡೆ ಮಾಡಿದ್ದು ಭಾರತ ದುರ್ಬಲ ರಾಷ್ಟ್ರ ಎಂಬ ಸಂದೇಶ ನೀಡಿತ್ತು ಎಂದು ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಕಠ್ಮಂಡುಯಿಂದ ನವದೆಹಲಿಗೆ ತೆರಳುತ್ತಿದ್ದ ಐಸಿ- 814 ವಿಮಾನವನ್ನು 1999 ರಲ್ಲಿ ಹರ್ಕತ್-ಉಲ್-ಮುಜಾಹಿದೀನ್ ಸಂಘಟನೆ ಉಗ್ರರು ಅಪಹರಣ ಮಾಡಿದ್ದರು, ನಂತರ ಅಪ್ಘಾನಿಸ್ತಾನದ ಕಂದಹಾರ್ ಗೆ ಕೊಡೊಯ್ಯಲಾಗಿತ್ತು. ಪ್ರಯಾಣಿಕರ ಸುರಕ್ಷತೆಯ ಕಾರಣದಿಂದ ಉಗ್ರರ ಬೇಡಿಕೆಯಂತೆ ಭಾರತದ ವಶದಲ್ಲಿದ್ದ 3  ಉಗ್ರರನ್ನು ಬಿಡುಗಡೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸ ವರ್ಷಾಚರಣೆಗೆ ಬೆಂಗಳೂರು ಸಜ್ಜು: ಎಂ.ಜಿ. ರಸ್ತೆ, ಬ್ರಿಗೇಡ್ ರಸ್ತೆಗಳಲ್ಲಿ ಬಿಗಿ ಬಂದೋಬಸ್ತ್, ಫ್ಲೈಓವರ್'ಗಳು ಬಂದ್

ಮೇ ತಿಂಗಳ ಭಾರತ-ಪಾಕಿಸ್ತಾನ ಸಂಘರ್ಷ ವೇಳೆ ಮಧ್ಯಸ್ಥಿಕೆ ವಹಿಸಿದ್ದು ನಾವೇ: ಚೀನಾ

ಭಾರತೀಯ ರೈಲ್ವೆ ಇತಿಹಾಸದಲ್ಲಿ ಮಹತ್ತರ ಸಾಧನೆ: ಗಂಟೆಗೆ 180 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್ ; ವಿಡಿಯೋ ಹಂಚಿಕೊಂಡ ಅಶ್ವಿನಿ ವೈಷ್ಣವ್

New Year ಗೆ ಆನ್ ಲೈನ್ ಫುಡ್ ಆರ್ಡರ್ ಗೆ ಸಮಸ್ಯೆ: ಒಕ್ಕೂಟಗಳಿಂದ ಇಂದು ಮೆಗಾ ಪ್ರತಿಭಟನೆ, 1.5 ಲಕ್ಷ ಕಾರ್ಮಿಕರು ಭಾಗಿ

ಮಠಾಧೀಶರ ತೀವ್ರ ಆಕ್ಷೇಪ: ಮಥುರಾದಲ್ಲಿ ಆಯೋಜಿಸಿದ್ದ ಸನ್ನಿ ಲಿಯೋನ್ ಕಾರ್ಯಕ್ರಮ ರದ್ದು!

SCROLL FOR NEXT