ಅಡ್ವಾಣಿ(ಸಂಗ್ರಹ ಚಿತ್ರ) 
ದೇಶ

ಅಡ್ವಾಣಿ 1999 ರ ಉಗ್ರರ ಬಿಡುಗಡೆ ಪರವಾಗಿರಲಿಲ್ಲ: ಫಾರೂಕ್ ಅಬ್ದುಲ್ಲಾ

1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ- ಫಾರೂಕ್ ಅಬ್ದುಲ್ಲಾ

ನವದೆಹಲಿ: 1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅಬ್ದುಲ್ಲಾ, ಅಡ್ವಾಣಿ ಉಗ್ರರ ಬಿಡುಗಡೆ ಮಾಡುವ ಪರವಾಗಿರಲಿಲ್ಲ, ಬಹುಶಃ ಅವರನ್ನು  ಒತ್ತಡ ಹೇರಿ ಒಪ್ಪಿಸಲಾಗಿತ್ತು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿಕೆ ನೀಡಿದ್ದಾರೆ.ಪ್ರಾಮಾಣಿಕವಾಗಿ ಹೇಳಬೇಕೆಂದರೆ ಉಗ್ರರನ್ನು ಬಿಡುಗಡೆ ಮಾಡಿದ್ದು ಭಾರತ ದುರ್ಬಲ ರಾಷ್ಟ್ರ ಎಂಬ ಸಂದೇಶ ನೀಡಿತ್ತು ಎಂದು ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಕಠ್ಮಂಡುಯಿಂದ ನವದೆಹಲಿಗೆ ತೆರಳುತ್ತಿದ್ದ ಐಸಿ- 814 ವಿಮಾನವನ್ನು 1999 ರಲ್ಲಿ ಹರ್ಕತ್-ಉಲ್-ಮುಜಾಹಿದೀನ್ ಸಂಘಟನೆ ಉಗ್ರರು ಅಪಹರಣ ಮಾಡಿದ್ದರು, ನಂತರ ಅಪ್ಘಾನಿಸ್ತಾನದ ಕಂದಹಾರ್ ಗೆ ಕೊಡೊಯ್ಯಲಾಗಿತ್ತು. ಪ್ರಯಾಣಿಕರ ಸುರಕ್ಷತೆಯ ಕಾರಣದಿಂದ ಉಗ್ರರ ಬೇಡಿಕೆಯಂತೆ ಭಾರತದ ವಶದಲ್ಲಿದ್ದ 3  ಉಗ್ರರನ್ನು ಬಿಡುಗಡೆ ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಮಂಗಳೂರು: ಆಟೋಗೆ KSRTC ಬಸ್ ಡಿಕ್ಕಿ; ಭೀಕರ ಅಪಘಾತದಲ್ಲಿ ಮಗು ಸೇರಿ ಆರು ಸಾವು - Video

ನಗರ ನಕ್ಸಲರ ಟಾರ್ಗೆಟ್‌ ಚಾಮುಂಡಿ ಬೆಟ್ಟ- ಬಿಎಲ್ ಸಂತೋಷ್: ಸತ್ಯ ಹೇಳಿದರೆ ಕೆಲವರು ಸಹಿಸಲ್ಲ, ಮಾತನಾಡದಿರುವುದೇ ಲೇಸು-dks

ಉಳಿಕೆ ಮತ್ತು ಹೂಡಿಕೆ ನಡುವೆ ಸಮತೋಲನವಿರಲಿ! (ಹಣಕ್ಲಾಸು)

Modi ma*****ch**: ರಾಹುಲ್ ಗಾಂಧಿ Voter Adhikar Yatra ವೇದಿಕೆಯಲ್ಲಿ ಅಶ್ಲೀಲ ನಿಂದನೆ, BJP ಕೆಂಡಾಮಂಡಲ!

Chinnaswamy stampede: 'ನಿಮ್ಮೊಂದಿಗೆ ನಾವಿದ್ದೇವೆ..' 3 ತಿಂಗಳ ಬಳಿಕ ಕೊನೆಗೂ ಮೌನ ಮುರಿದ RCB, ಹೇಳಿದ್ದೇನು?

SCROLL FOR NEXT