ಅಡ್ವಾಣಿ(ಸಂಗ್ರಹ ಚಿತ್ರ) 
ದೇಶ

ಅಡ್ವಾಣಿ 1999 ರ ಉಗ್ರರ ಬಿಡುಗಡೆ ಪರವಾಗಿರಲಿಲ್ಲ: ಫಾರೂಕ್ ಅಬ್ದುಲ್ಲಾ

1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ- ಫಾರೂಕ್ ಅಬ್ದುಲ್ಲಾ

ನವದೆಹಲಿ: 1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅಬ್ದುಲ್ಲಾ, ಅಡ್ವಾಣಿ ಉಗ್ರರ ಬಿಡುಗಡೆ ಮಾಡುವ ಪರವಾಗಿರಲಿಲ್ಲ, ಬಹುಶಃ ಅವರನ್ನು  ಒತ್ತಡ ಹೇರಿ ಒಪ್ಪಿಸಲಾಗಿತ್ತು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿಕೆ ನೀಡಿದ್ದಾರೆ.ಪ್ರಾಮಾಣಿಕವಾಗಿ ಹೇಳಬೇಕೆಂದರೆ ಉಗ್ರರನ್ನು ಬಿಡುಗಡೆ ಮಾಡಿದ್ದು ಭಾರತ ದುರ್ಬಲ ರಾಷ್ಟ್ರ ಎಂಬ ಸಂದೇಶ ನೀಡಿತ್ತು ಎಂದು ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಕಠ್ಮಂಡುಯಿಂದ ನವದೆಹಲಿಗೆ ತೆರಳುತ್ತಿದ್ದ ಐಸಿ- 814 ವಿಮಾನವನ್ನು 1999 ರಲ್ಲಿ ಹರ್ಕತ್-ಉಲ್-ಮುಜಾಹಿದೀನ್ ಸಂಘಟನೆ ಉಗ್ರರು ಅಪಹರಣ ಮಾಡಿದ್ದರು, ನಂತರ ಅಪ್ಘಾನಿಸ್ತಾನದ ಕಂದಹಾರ್ ಗೆ ಕೊಡೊಯ್ಯಲಾಗಿತ್ತು. ಪ್ರಯಾಣಿಕರ ಸುರಕ್ಷತೆಯ ಕಾರಣದಿಂದ ಉಗ್ರರ ಬೇಡಿಕೆಯಂತೆ ಭಾರತದ ವಶದಲ್ಲಿದ್ದ 3  ಉಗ್ರರನ್ನು ಬಿಡುಗಡೆ ಮಾಡಲಾಗಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?