ಅಡ್ವಾಣಿ(ಸಂಗ್ರಹ ಚಿತ್ರ) 
ದೇಶ

ಅಡ್ವಾಣಿ 1999 ರ ಉಗ್ರರ ಬಿಡುಗಡೆ ಪರವಾಗಿರಲಿಲ್ಲ: ಫಾರೂಕ್ ಅಬ್ದುಲ್ಲಾ

1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ- ಫಾರೂಕ್ ಅಬ್ದುಲ್ಲಾ

ನವದೆಹಲಿ: 1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅಬ್ದುಲ್ಲಾ, ಅಡ್ವಾಣಿ ಉಗ್ರರ ಬಿಡುಗಡೆ ಮಾಡುವ ಪರವಾಗಿರಲಿಲ್ಲ, ಬಹುಶಃ ಅವರನ್ನು  ಒತ್ತಡ ಹೇರಿ ಒಪ್ಪಿಸಲಾಗಿತ್ತು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿಕೆ ನೀಡಿದ್ದಾರೆ.ಪ್ರಾಮಾಣಿಕವಾಗಿ ಹೇಳಬೇಕೆಂದರೆ ಉಗ್ರರನ್ನು ಬಿಡುಗಡೆ ಮಾಡಿದ್ದು ಭಾರತ ದುರ್ಬಲ ರಾಷ್ಟ್ರ ಎಂಬ ಸಂದೇಶ ನೀಡಿತ್ತು ಎಂದು ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಕಠ್ಮಂಡುಯಿಂದ ನವದೆಹಲಿಗೆ ತೆರಳುತ್ತಿದ್ದ ಐಸಿ- 814 ವಿಮಾನವನ್ನು 1999 ರಲ್ಲಿ ಹರ್ಕತ್-ಉಲ್-ಮುಜಾಹಿದೀನ್ ಸಂಘಟನೆ ಉಗ್ರರು ಅಪಹರಣ ಮಾಡಿದ್ದರು, ನಂತರ ಅಪ್ಘಾನಿಸ್ತಾನದ ಕಂದಹಾರ್ ಗೆ ಕೊಡೊಯ್ಯಲಾಗಿತ್ತು. ಪ್ರಯಾಣಿಕರ ಸುರಕ್ಷತೆಯ ಕಾರಣದಿಂದ ಉಗ್ರರ ಬೇಡಿಕೆಯಂತೆ ಭಾರತದ ವಶದಲ್ಲಿದ್ದ 3  ಉಗ್ರರನ್ನು ಬಿಡುಗಡೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT