ಅಡ್ವಾಣಿ(ಸಂಗ್ರಹ ಚಿತ್ರ) 
ದೇಶ

ಅಡ್ವಾಣಿ 1999 ರ ಉಗ್ರರ ಬಿಡುಗಡೆ ಪರವಾಗಿರಲಿಲ್ಲ: ಫಾರೂಕ್ ಅಬ್ದುಲ್ಲಾ

1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ- ಫಾರೂಕ್ ಅಬ್ದುಲ್ಲಾ

ನವದೆಹಲಿ: 1999 ರಲ್ಲಿ ನಡೆದಿದ್ದ ಐಸಿ- 814 ವಿಮಾನ ಅಪಹರಣ ಪ್ರಕರಣದಲ್ಲಿ ಉಗ್ರರನ್ನು ಬಿಡುಗಡೆ ಮಾಡುವುದಕ್ಕೆ ಅಂದಿನ ಗೃಹ ಮಂತ್ರಿ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಇಷ್ಟ ಇರಲಿಲ್ಲ ಎಂದು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅಬ್ದುಲ್ಲಾ, ಅಡ್ವಾಣಿ ಉಗ್ರರ ಬಿಡುಗಡೆ ಮಾಡುವ ಪರವಾಗಿರಲಿಲ್ಲ, ಬಹುಶಃ ಅವರನ್ನು  ಒತ್ತಡ ಹೇರಿ ಒಪ್ಪಿಸಲಾಗಿತ್ತು ಎಂಬುದು ನನ್ನ ಅಭಿಪ್ರಾಯ ಎಂದು ಹೇಳಿಕೆ ನೀಡಿದ್ದಾರೆ.ಪ್ರಾಮಾಣಿಕವಾಗಿ ಹೇಳಬೇಕೆಂದರೆ ಉಗ್ರರನ್ನು ಬಿಡುಗಡೆ ಮಾಡಿದ್ದು ಭಾರತ ದುರ್ಬಲ ರಾಷ್ಟ್ರ ಎಂಬ ಸಂದೇಶ ನೀಡಿತ್ತು ಎಂದು ಅಬ್ದುಲ್ಲಾ ಅಭಿಪ್ರಾಯಪಟ್ಟಿದ್ದಾರೆ.

ಕಠ್ಮಂಡುಯಿಂದ ನವದೆಹಲಿಗೆ ತೆರಳುತ್ತಿದ್ದ ಐಸಿ- 814 ವಿಮಾನವನ್ನು 1999 ರಲ್ಲಿ ಹರ್ಕತ್-ಉಲ್-ಮುಜಾಹಿದೀನ್ ಸಂಘಟನೆ ಉಗ್ರರು ಅಪಹರಣ ಮಾಡಿದ್ದರು, ನಂತರ ಅಪ್ಘಾನಿಸ್ತಾನದ ಕಂದಹಾರ್ ಗೆ ಕೊಡೊಯ್ಯಲಾಗಿತ್ತು. ಪ್ರಯಾಣಿಕರ ಸುರಕ್ಷತೆಯ ಕಾರಣದಿಂದ ಉಗ್ರರ ಬೇಡಿಕೆಯಂತೆ ಭಾರತದ ವಶದಲ್ಲಿದ್ದ 3  ಉಗ್ರರನ್ನು ಬಿಡುಗಡೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

T20 World Cup, IND vs Pak: ಇಶಾನ್ ಕಿಶಾನ್ ಬ್ಯಾಟಿಂಗ್ ಅಬ್ಬರ; ಸ್ಪಿನ್ ಮೋಡಿಗೆ ಪಾಕ್ ತತ್ತರ, ಭಾರತಕ್ಕೆ 61 ರನ್ ಗೆಲುವು!

T20 World Cup 2026: ಸೂಪರ್ 8 ಹಂತಕ್ಕೆ ಭಾರತ ಲಗ್ಗೆ; ದೇಶಾದ್ಯಂತ ಸಂಭ್ರಮಾಚರಣೆ, ಗಣ್ಯರ ಶುಭಾಶಯ!

'ಈ ಛಲವಾದಿ ನಾರಾಯಣಸ್ವಾಮಿ ನಾಯಿ ಥರ...ಪಾಪ ಬೊಗಳಿದೆ, ಅದಕ್ಕೆ ನಾವೇನೂ ಕಲ್ಲು ಎಸೆಯಲು ಹೋಗೋದಿಲ್ಲ'

4 ಕೋಟಿ ರೂ. ಮೌಲ್ಯದ ಗ್ರಾಹಕರ ಚಿನ್ನಾಭರಣ ಕದ್ದು, ಆನ್‌ಲೈನ್ ಬೆಟ್ಟಿಂಗ್‌: ಬ್ಯಾಂಕ್ ಮ್ಯಾನೇಜರ್ ಬಂಧನ, ಸಿಕ್ಕಿಬಿದ್ದಿದ್ದೇ ರೋಚಕ!

Bengaluru: 'ಮನೆಗೆ ಸೂರ್ಯನ ಬೆಳಕು ಬರುತ್ತದೆ' ಎಂಬ ಒಂದೇ ಕಾರಣಕ್ಕೆ 80 ಸಾವಿರ ಬಾಡಿಗೆ ಕೇಳಿದ ಮಾಲೀಕ!

SCROLL FOR NEXT