ಸುಪ್ರೀಂಕೋರ್ಟ್(ಸಂಗ್ರಹ ಚಿತ್ರ) 
ದೇಶ

ಜೀವಾವಧಿಗಿಂತ ಗಲ್ಲೇ ಲೇಸು: ಸುಪ್ರೀಂ

ಕಳೆದ ವರ್ಷ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ಕೋರಿದ್ದ ಕೇಂದ್ರ ಸರ್ಕಾರದ...

ನವದೆಹಲಿ: ಕಳೆದ ವರ್ಷ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ಮುಂದಾಗಿದ್ದ ತಮಿಳುನಾಡು ಸರ್ಕಾರದ ಕ್ರಮಕ್ಕೆ ತಡೆಯಾಜ್ಞೆ ಕೋರಿದ್ದ ಕೇಂದ್ರ ಸರ್ಕಾರದ ಮೇಲ್ಮನವಿ ವಿಚಾರಣೆ ವೇಳೆ ಗುರುವಾರ ಸುಪ್ರೀಂಕೋರ್ಟ್ ಜೀವಾವಧಿ ಶಿಕ್ಷೆ ಕುರಿತ ಮಹತ್ವದ ಅಭಿಪ್ರಾಯ ವ್ಯಕ್ತಪಡಿಸಿದೆ.  

ಸಿಜೆಐ ಎಚ್.ಎಲ್. ದತ್ತು ನೇತೃತ್ವದ  ಐವರು ನ್ಯಾಯಮೂರ್ತಿಗಳ ಸಂವಿಧಾನಿಕ ಪೀಠದ ಅಭಿಪ್ರಾಯದ ಸಾರ ಇಂತಿದೆ: 'ಜೀವಾವಧಿ ಶಿಕ್ಷೆಗೆ ಗುರಿಯಾದ ಕೈದಿಯೊಬ್ಬ ಕೊನೇ ಉಸಿರಿರುವವರೆಗೆ ಜೈಲಿನಲ್ಲೇ  ಕಳೆಯಬೇಕು ಎಂಬುದಕ್ಕಿಂತ ಆತನಿಗೆ ಮರಣದಂಡನೆ ವಿಧಿಸುವುದೇ ಸೂಕ್ತ. ನಾಳೆಯ ಭರವಸೆ ಮೇಲೆ ನಾವೆಲ್ಲಾ  ಬದುಕುತ್ತೇವೆ. ಆದರೆ, ಜೀವಾವಧಿ ಶಿಕ್ಷೆ ಅನುಭವಿಸುವ ವ್ಯಕ್ತಿಗೆ ಅಂತಹ ಭರವಸೆಯೇ ಇರುವುದಿಲ್ಲ.

ಹಾಗಾದರೆ, ಅದು ಪರಿವರ್ತನೆಯಲ್ಲಿ ನಂಬಿಕೆ ಇಟ್ಟಿರುವ ನಮ್ಮ ಶಿಕ್ಷಾ ವ್ಯವಸ್ಥೆಯ ಉದ್ದೇಶಕ್ಕೇ ವಿರುದ್ಧ. ಪರಿವರ್ತನೆಯಿಂದ ಪ್ರತಿಫಲವೇ ಇಲ್ಲವೆನ್ನುವುದಾದರೆ ಕೈದಿಯೊಬ್ಬ ಯಾಕೆ ತನ್ನನ್ನು ತಾನು ಬದಲಾಯಿಸಿಕೊಳ್ಳುವ  ಮನಸ್ಸು ಮಾಡುತ್ತಾನೆ. ಆದ್ದರಿಂದ  ಜೀವಾವಧಿ ಶಿಕ್ಷೆಯ ಹಿಂದಿನ ತಾರ್ಕಿಕತೆಯೇ ಪ್ರಶ್ನಾರ್ಹ''. ಈ ಮೂಲಕ ರಾಜೀವ್ ಗಾಂಧಿ ಹಂತಕರಿಗೆ ಗಲ್ಲು ಶಿಕ್ಷೆಯೇ ಸೂಕ್ತ ಎಂಬ ಅಭಿಪ್ರಾಯವನ್ನು ನ್ಯಾಯಪೀಠ  ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT