ಕೇಂದ್ರ ಸಚಿವ ನಿತಿನ್ ಗಡ್ಕರಿ ಹಾಗೂ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ 
ದೇಶ

ಸುಷ್ಮಾ ಸ್ವರಾಜ್ ಬಳಿ ಕ್ಷಮೆ ಕೇಳಿ ಇಲ್ಲವೇ ಮೊಕದ್ದಮೆ ಎದುರಿಸಿ: ನಿತಿನ್ ಗಡ್ಕರಿ

ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ಅವಮಾನಕರ ರೀತಿಯ ಹೇಳಿಕೆ ನೀಡುತ್ತಿದ್ದು, ರಾಹುಲ್ ಗಾಂಧಿ ಕೂಡಲೇ ಸುಷ್ಮಾ ಬಳಿ ಕ್ಷಮೆ ಕೇಳಬೇಕು. ಒಂದು ವೇಳೆ ಕೇಳದಿದ್ದರೆ ಮಾನನಷ್ಟ ಮೊಕದ್ದಮೆ ಪ್ರಕರಣ ಎದುರಿಸಬೇಕಾಗುತ್ತದೆ...

ನವದೆಹಲಿ: ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ವಿರುದ್ಧ ಕಾಂಗ್ರೆಸ್ ಉಪಾಧ್ಯಕ್ಷ ಅರಿವಿಲ್ಲದ ಹೇಳಿಕೆ ನೀಡುತ್ತಿದ್ದು, ರಾಹುಲ್ ಗಾಂಧಿ ಕೂಡಲೇ ಸುಷ್ಮಾ ಬಳಿ ಕ್ಷಮೆ ಕೇಳಬೇಕು. ಒಂದು ವೇಳೆ ಕೇಳದಿದ್ದರೆ ಮಾನನಷ್ಟ ಮೊಕದ್ದಮೆ ಪ್ರಕರಣ ಎದುರಿಸಬೇಕಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಶುಕ್ರವಾರ ಹೇಳಿದ್ದಾರೆ.

ಸುಷ್ಮಾ ಸ್ವರಾಜ್ ಕುರಿತಂತೆ ರಾಹುಲ್ ಗಾಂಧಿ ಅವರು ಅತೀ ಸೂಕ್ಷ್ಮ ಹಾಗೂ ಅವಮಾನಕಾರಿ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಸುಷ್ಮಾ ಈ ವರೆಗೂ ಯಾವುದೇ ರೀತಿಯಲ್ಲೂ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿಲ್ಲ ಹಾಗೂ ಕಚೇರಿಯನ್ನು ದುರ್ಬಳಕೆ ಮಾಡಿಕೊಂಡಿಲ್ಲ. ಹಾಗಾಗಿ ರಾಹುಲ್ ಗಾಂಧಿ ಕೂಡಲೇ ಸುಷ್ಮಾ ವಿರುದ್ಧ ನೀಡಿರುವ ಹೇಳಿಕೆಯನ್ನು ಹಿಂಪಡೆದುಕೊಂಡು ಕ್ಷಣೆಯಾಚಿಸಬೇಕೆಂದು ಆಗ್ರಹಿಸಿದ್ದಾರೆ.

ಅಕ್ರಮ ವೀಸಾ ಸಂಬಂಧಿಸಿದ ಲಲಿತ್ ಮೋದಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಅಪರಾಧ ಮಾಡಿರುವುದು ಇಡೀ ದೇಶಕ್ಕೆ ತಿಳಿದಿರುವ ವಿಚಾರ. ಅವರ ಮೇಲೆ ಯಾರು ಬೇಕಾದರೂ ಅಪರಾಧ ಪ್ರಕರಣ ದಾಖಲಿಸಬಹುದು. ಆದರೆ, ಸುಷ್ಮಾ ವಿರುದ್ದ ಪ್ರಕರಣ ದಾಖಲಿಸುವವರೇ ಇದೀಗ ಜೈಲಿಗೆ ಹೋಗುವ ಪರಿಸ್ಥಿತಿ ಎದುರಾಗಿದೆ. ಹಾಗಾಗಿ ಸುಷ್ಮಾ ಸ್ವರಾಜ್ ಅವರನ್ನು ಕೂಡಲೇ ಪಕ್ಷದಿಂದ ವಜಾಗೊಳಿಸಿ ಜೈಲಿಗೆ ಹಾಕಬೇಕು ಎಂದು ಹೇಳಿದ್ದರು.

ಸಂಸತ್ ನಲ್ಲಿ ಮುಂಗಾರು ಅಧಿವೇಶನ ನಡೆಯುತ್ತಿದ್ದು, ಕಳೆದ 4 ನಾಲ್ಕು ದಿನಗಳಿಂದಲೂ ಕಾಂಗ್ರೆಸ್ ಪಕ್ಷ ಅಕ್ರಮ ವೀಸಾ ಲಲಿತ್ ಮೋದಿ ಪ್ರಕರಣ ಹಾಗೂ ಮಧ್ಯಪ್ರದೇಶದ ನಿಗೂಢ ಸಾವುಗಳ ಬಹುಕೋಟಿ ವ್ಯಾಪಂ ಹಗರಣ ಪ್ರಕರಣಗಳನ್ನಿಡಿದು ಪ್ರತಿಭಟನೆಗಳನ್ನು ನಡೆಸುತ್ತಿದೆ. ಸಂಸತ್ ನಲ್ಲಿ ಪ್ರತಿಪಕ್ಷಗಳು ಸೃಷ್ಟಿಸಿರುವ ಗದ್ದಲದಿಂದಾಗಿ ಅಧಿವೇಶನ ನಡೆಯದೆ ಇದೀಗ ಸೋಮವಾರದವರೆಗೂ ಮುಂದೂಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ಕೇರಳದ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಭಾಷೆಯಾಗಿ ಮಲಯಾಳಂ ಕಡ್ಡಾಯ: ಹೋರಾಟ ನಡೆಸುತ್ತೇವೆಂದ ಸಿಎಂ ಸಿದ್ದರಾಮಯ್ಯ

ಇರಾನ್ ನಲ್ಲಿ 2 ವಾರ ಪೂರೈಸಿದ ಪ್ರತಿಭಟನೆ: ಸರ್ಕಾರಿ ಕಟ್ಟಡಗಳಿಗೆ ಬೆಂಕಿ, ಪ್ರತಿಭಟನಾಕಾರರಿಗೆ 'ಮರಣ ದಂಡನೆ' ಬೆದರಿಕೆ!

"Surely It's Time": ಕೊಹ್ಲಿ ನಿವೃತ್ತಿ ಬಗ್ಗೆ ದೊಡ್ಡ ಸಂದೇಶ ರವಾನಿಸಿದ ಉತ್ತಪ್ಪ!

SCROLL FOR NEXT