ಶ್ರೀನಗರದಲ್ಲಿ ಇಂದು ಗ್ರೆನೇಡ್ ದಾಳಿಗೆ ಒಳಗಾದ ಏರ್ ಸೆಲ್ ಶೋರೂಂ 
ದೇಶ

ಟೆಲಿಕಾಂ ಶೋರೂಂ ಮೇಲೆ ಉಗ್ರರ ಗ್ರೆನೇಡ್ ದಾಳಿ

ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರ ಸಿಟಿಯ ಮಧ್ಯಭಾಗದಲ್ಲಿರುವ ಏರ್ ಸೆಲ್ ಮತ್ತು ...

ಶ್ರೀನಗರ: ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರ ಸಿಟಿಯ ಮಧ್ಯಭಾಗದಲ್ಲಿರುವ ಏರ್ ಸೆಲ್ ಮತ್ತು ವೊಡಾಫೋನ್ ಮೊಬೈಲ್ ಕಂಪೆನಿ ಶೋರೂಂ ಮೇಲೆ ಶಂಕಿತ ಉಗ್ರರು ಶುಕ್ರವಾರ ಗ್ರೆನೇಡ್ ದಾಳಿ ನಡೆಸಿದ್ದಾರೆ.

ಕೆಲವೇ ನಿಮಿಷಗಳ ಅಂತರದಲ್ಲಿ ಈ ದಾಳಿ ನಡೆದಿದ್ದು, ಘಟನೆಯಲ್ಲಿ ಯಾರೊಬ್ಬರಿಗೂ ಗಾಯಗಳಾಗಿಲ್ಲ.

ಇಬ್ಬರು ಅಪರಿಚಿತ ಯುವಕರು ಇಂದು ಬೆಳಗ್ಗೆ 11.30ರ ಸುಮಾರಿಗೆ ಶ್ರೀನಗರದ ಕರಣ್ ನಗರದಲ್ಲಿರುವ ಏರ್ ಸೆಲ್ ಕಚೇರಿಗೆ ನುಗ್ಗಿ ಅಲ್ಲಿ ಕೆಲಸ ಮಾಡುತ್ತಿದ್ದ ನೌಕರರನ್ನು ಹೊರಗೆ ಹೋಗುವಂತೆ ಸೂಚಿಸಿದರು. ಕಂಪೆನಿಯ ಆವರಣದೊಳಗೆ ಗ್ರೆನೇಡ್ ಎಸೆದು ಅಲ್ಲಿಂದ ಓಡಿ ಹೋಗಿದ್ದಾರೆ.ನಂತರ ಅಲ್ಲಿಂದ 500 ಮೀಟರ್ ದೂರದಲ್ಲಿರುವ ವೊಡಫೋನ್ ಶೋರೂಂನ ಮೇಲೆಯೂ ಯುವಕರು ದಾಳಿ ನಡೆಸಿದರು ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರಗಾಮಿಗಳು ಕಳೆದ ಮೇ ತಿಂಗಳಿನಲ್ಲಿ ಉತ್ತರ ಕಾಶ್ಮೀರದ ಸೊಪೊರೆ ಪಟ್ಟಣದಲ್ಲಿ ಮತ್ತು ಪಟ್ಟನ್ ಎಂಬಲ್ಲಿ  ಮೊಬೈಲ್ ಕಂಪೆನಿಗಳ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

SCROLL FOR NEXT