ಸಲ್ಮಾನ್ ಖಾನ್ 
ದೇಶ

ಯಾಕೂಬ್‌ ಪರ ಟ್ವೀಟ್‌: ಟ್ವೀಟ್ ವಾಪಸ್ ಪಡೆದ ಸಲ್ಮಾನ್ ಖಾನ್

ಮುಂಬೈ ಸರಣಿ ಸ್ಫೋಟದ ರೂವಾರಿ ಯಾಕೂಬ್ ಮೆನನ್ ಮರಣದಂಡನೆಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಟ್ವೀಟ್ ಗೆ ದೇಶಾದ್ಯಂತ ತೀವ್ರ...

ಮುಂಬೈ: ಮುಂಬೈ ಸರಣಿ ಸ್ಫೋಟದ ರೂವಾರಿ ಯಾಕೂಬ್ ಮೆನನ್ ಮರಣದಂಡನೆಗೆ ಸಂಬಂಧಿಸಿದಂತೆ ಬಾಲಿವುಡ್ ನಟ ಸಲ್ಮಾನ್ ಖಾನ್ ಟ್ವೀಟ್ ಗೆ ದೇಶಾದ್ಯಂತ ತೀವ್ರ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ತಮ್ಮ ಟ್ವೀಟ್ ನ್ನು ಹಿಂಪಡೆದಿರುವುದಾಗಿ ಸಲ್ಲು ಹೇಳಿದ್ದಾರೆ.

ನಾನು ಯಾವುದೇ ಒಂದು ಧರ್ಮಕ್ಕೆ ಬದ್ಧನಾದವನಲ್ಲ. ನಾನು ದೇಶದ ಎಲ್ಲಾ ಧರ್ಮದ ಜನರನ್ನು ಗೌರವಿಸುತ್ತೇನೆ. ಕಾನೂನಿನಲ್ಲಿ ಸಂಪೂರ್ಣ ನಂಬಿಕೆ ಇದೆ. ನಾನು ಟ್ವೀಟ್‌ ಮಾಡಿರುವುದು ತಪ್ಪಾಗಿದೆ. ನನ್ನ ತಂದೆಯ ಸಲಹೆಯಂತೆ ನನ್ನ ಟ್ವೀಟ್‌ ಹಿಂಪಡೆದುಕೊಳ್ಳುತ್ತಾ ದೇಶದ ಜನರಲ್ಲಿ ಬೇಷರತ್‌ ಕ್ಷಮೆ ಯಾಚಿಸುತ್ತೇನೆ' ಎಂದು ಮರು ಟ್ವೀಟ್‌ ಮಾಡಿದ್ದಾರೆ.  

ಸಲ್ಮಾನ್ ಖಾನ್ ಮುಂಬೈ ನಿವಾಸದ ಎದುರು ಇಂದು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಪ್ರತಿಭಟನಾ ನಿರತರನ್ನು ತಡೆಯಲು ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿತ್ತು.

ನಾಗ್ಪುರ ಸೆಂಟ್ರಲ್‌ ಜೈಲಿನಲ್ಲಿ ಯಾಕೂಬ್ ಮೆಮನ್‌ನ ಕೊರಳಿಗೆ ಕುಣಿಕೆ ಬಿಗಿಯಲು ಪೂರ್ವ ತಯಾರಿಗಳು ಭರದಿಂದ ನಡೆಯುತ್ತಿವೆ. ಜೈಲಿನ ಅಧಿಕಾರಿಗಳು ಯಾಕೂಬ್‌ನನ್ನು ಗಲ್ಲಿಗೇರಿಸುವ ಸಂಬಂಧ ರಿಹರ್ಸಲ್‌ಗ‌ಳನ್ನು ಮತ್ತು ಸತತ ಸಭೆಗಳನ್ನು ನಡೆಸತೊಡಗಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT