ಮಾಜಿ ರಾಷ್ಟ್ರಪತಿ, ಡಾ.ಎಪಿಜೆ ಅಬ್ದುಲ್ ಕಲಾಂ 
ದೇಶ

ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ನಿಧನ

ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ.ಎಪಿಜೆ ಅಬ್ದುಲ್ ಕಲಾಂ ವಿಧಿವಶರಾಗಿದ್ದಾರೆ.

ಶಿಲ್ಲಾಂಗ್: ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ.ಎಪಿಜೆ ಅಬ್ದುಲ್ ಕಲಾಂ ವಿಧಿವಶರಾಗಿದ್ದಾರೆ.

ಜುಲೈ 21 ರ ಸಂಜೆ  ಶಿಲ್ಲಾಂಗ್ ನ ಐಐಎಂ ನಲ್ಲಿ ಉಪನ್ಯಾಸ ನೀಡುತ್ತಿರಬೇಕಾದರೆ ಏಕಾಏಕಿ ಕುಸಿದುಬಿದ್ದಿದ್ದ ಕಲಾಂ ಅವರ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ಕೂಡಲೇ ಅವರನ್ನು ಶಿಲ್ಲಾಂಗ್ ನ ಬೆಥೇನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದಾರೆ.

84 ವರ್ಷದ ಅಬ್ದುಲ್ ಕಲಾಂ ಅವರು ವಿಜ್ಞಾನಿಯಾಗಿ ಮಾತ್ರವಲ್ಲದೇ ಭಾರತೀಯರ ನೆಚ್ಚಿನ ರಾಷ್ಟ್ರಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಬ್ದುಲ್ ಕಲಾಂ ಅವರು ಅನಾರೋಗ್ಯಕ್ಕೊಳಗಾಗಿದ್ದ ಹಿನ್ನೆಲೆಯಲ್ಲಿ ಮೇಘಾಲಯ ಸರ್ಕಾರ ವಿಶೇಷ ವೈದ್ಯರ ತಂಡ ರಚಿಸಿ ಕಲಾಂ ಆರೋಗ್ಯದ ಮೇಲ್ವಿಚಾರಣೆ ನಡೆಸಬೇಕೆಂದು ಸೂಚಿಸಿತ್ತು.

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಉದ್ಯೋಗಿಯಾಗಿ ವೃತ್ತಿಜೀವನ ಪ್ರಾರಂಭಿಸಿದ್ದ ಅಬ್ದುಲ್ ಕಲಾಂರಿಗೆ ರಾಷ್ಟ್ರಪತಿ ಹುದ್ದೆ ಅರಸಿ ಬಂದಿತ್ತು. 2002 ರಿಂದ 2007ರ ಅವಧಿಯಲ್ಲಿ ಅಬ್ದುಲ್ ಕಲಾಂ ಭಾರತದ 11 ನೇ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದ್ದರು. ರಾಜಸ್ಥಾನದ ಪೋಕ್ರಾನ್ ನಲ್ಲಿ ಅಣು ಪರೀಕ್ಷೆಯ ನೇತೃತ್ವ ವಹಿಸಿದ್ದ ಅಬ್ದುಲ್ ಕಲಾಂ ಭಾರತ ಅಣ್ವಸ್ತ್ರ ರಾಷ್ಟ್ರವಾಗುವುದರಲ್ಲಿ  ಮಹತ್ವದ ಪಾತ್ರ ವಹಿಸಿದ್ದರು. "ಮಿಸೈಲ್ ಮ್ಯಾನ್" ಎಂದೇ ವಿಶ್ವಾದ್ಯಂತ ಖ್ಯಾತಿ ಗಳಿಸಿದ್ದ ಕಲಾಂ ಅವರಿಗೆ 1997  ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಭಾರತದ ನೆಚ್ಚಿನ ರಾಷ್ಟ್ರಪತಿಯಾಗಿದ್ದ ಕಲಾಂ ಅವರ ಅಗಲಿಕೆಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದು ದೇಶಾದ್ಯಂತ 7 ದಿನಗಳ ವರೆಗೆ ಶೋಕಾಚಣೆ ನಡೆಯಲಿದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಗೋಯೆಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಬಿಕಿನಿ ಧರಿಸಿರುವ ಮಹಿಳೆಯರ ಜೊತೆಗೆ ಸ್ಟೀಫನ್ ಹಾಕಿಂಗ್! Epstein ಫೈಲ್ಸ್ ನಲ್ಲಿ ಪೋಟೋ ಬಿಡುಗಡೆ

ಅಜಿತ್ ಪವಾರ್ ವಿಮಾನ ಪತನ ವಿಧ್ವಂಸಕ ಕೃತ್ಯವೋ ಅಥವಾ ನಿರ್ಲಕ್ಷ್ಯವೋ? ಸಿಐಡಿ ಹೇಳಿದ್ದೇನು?

'The Kerala Story 2: Goes Beyond' ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

SCROLL FOR NEXT