ಮಾಜಿ ರಾಷ್ಟ್ರಪತಿ, ಡಾ.ಎಪಿಜೆ ಅಬ್ದುಲ್ ಕಲಾಂ 
ದೇಶ

ಮಾಜಿ ರಾಷ್ಟ್ರಪತಿ ಡಾ. ಎಪಿಜೆ ಅಬ್ದುಲ್ ಕಲಾಂ ನಿಧನ

ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ.ಎಪಿಜೆ ಅಬ್ದುಲ್ ಕಲಾಂ ವಿಧಿವಶರಾಗಿದ್ದಾರೆ.

ಶಿಲ್ಲಾಂಗ್: ಮಾಜಿ ರಾಷ್ಟ್ರಪತಿ, ವಿಜ್ಞಾನಿ ಡಾ.ಎಪಿಜೆ ಅಬ್ದುಲ್ ಕಲಾಂ ವಿಧಿವಶರಾಗಿದ್ದಾರೆ.

ಜುಲೈ 21 ರ ಸಂಜೆ  ಶಿಲ್ಲಾಂಗ್ ನ ಐಐಎಂ ನಲ್ಲಿ ಉಪನ್ಯಾಸ ನೀಡುತ್ತಿರಬೇಕಾದರೆ ಏಕಾಏಕಿ ಕುಸಿದುಬಿದ್ದಿದ್ದ ಕಲಾಂ ಅವರ ಆರೋಗ್ಯದಲ್ಲಿ ತೀವ್ರ ವ್ಯತ್ಯಾಸ ಕಂಡುಬಂದಿತ್ತು. ಕೂಡಲೇ ಅವರನ್ನು ಶಿಲ್ಲಾಂಗ್ ನ ಬೆಥೇನಿ ಆಸ್ಪತ್ರೆಯ ಐಸಿಯುಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದ ಅವರು ಕೊನೆಯುಸಿರೆಳೆದಿದ್ದಾರೆ.

84 ವರ್ಷದ ಅಬ್ದುಲ್ ಕಲಾಂ ಅವರು ವಿಜ್ಞಾನಿಯಾಗಿ ಮಾತ್ರವಲ್ಲದೇ ಭಾರತೀಯರ ನೆಚ್ಚಿನ ರಾಷ್ಟ್ರಪತಿಯಾಗಿಯೂ ಸೇವೆ ಸಲ್ಲಿಸಿದ್ದಾರೆ. ಅಬ್ದುಲ್ ಕಲಾಂ ಅವರು ಅನಾರೋಗ್ಯಕ್ಕೊಳಗಾಗಿದ್ದ ಹಿನ್ನೆಲೆಯಲ್ಲಿ ಮೇಘಾಲಯ ಸರ್ಕಾರ ವಿಶೇಷ ವೈದ್ಯರ ತಂಡ ರಚಿಸಿ ಕಲಾಂ ಆರೋಗ್ಯದ ಮೇಲ್ವಿಚಾರಣೆ ನಡೆಸಬೇಕೆಂದು ಸೂಚಿಸಿತ್ತು.

ಭಾರತೀಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಉದ್ಯೋಗಿಯಾಗಿ ವೃತ್ತಿಜೀವನ ಪ್ರಾರಂಭಿಸಿದ್ದ ಅಬ್ದುಲ್ ಕಲಾಂರಿಗೆ ರಾಷ್ಟ್ರಪತಿ ಹುದ್ದೆ ಅರಸಿ ಬಂದಿತ್ತು. 2002 ರಿಂದ 2007ರ ಅವಧಿಯಲ್ಲಿ ಅಬ್ದುಲ್ ಕಲಾಂ ಭಾರತದ 11 ನೇ ರಾಷ್ಟ್ರಪತಿಯಾಗಿ ಕಾರ್ಯನಿರ್ವಹಿಸಿದ್ದರು. ರಾಜಸ್ಥಾನದ ಪೋಕ್ರಾನ್ ನಲ್ಲಿ ಅಣು ಪರೀಕ್ಷೆಯ ನೇತೃತ್ವ ವಹಿಸಿದ್ದ ಅಬ್ದುಲ್ ಕಲಾಂ ಭಾರತ ಅಣ್ವಸ್ತ್ರ ರಾಷ್ಟ್ರವಾಗುವುದರಲ್ಲಿ  ಮಹತ್ವದ ಪಾತ್ರ ವಹಿಸಿದ್ದರು. "ಮಿಸೈಲ್ ಮ್ಯಾನ್" ಎಂದೇ ವಿಶ್ವಾದ್ಯಂತ ಖ್ಯಾತಿ ಗಳಿಸಿದ್ದ ಕಲಾಂ ಅವರಿಗೆ 1997  ರಲ್ಲಿ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಭಾರತದ ನೆಚ್ಚಿನ ರಾಷ್ಟ್ರಪತಿಯಾಗಿದ್ದ ಕಲಾಂ ಅವರ ಅಗಲಿಕೆಗೆ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಸೇರಿದಂತೆ ಗಣ್ಯರು ಕಂಬನಿ ಮಿಡಿದಿದ್ದು ದೇಶಾದ್ಯಂತ 7 ದಿನಗಳ ವರೆಗೆ ಶೋಕಾಚಣೆ ನಡೆಯಲಿದೆ ಎಂದು ಕೇಂದ್ರ ಗೃಹ ಕಾರ್ಯದರ್ಶಿ ಗೋಯೆಲ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT