ಸೆಂಥಿಲ್ ಬಾಲಾಜಿ 
ದೇಶ

ಜಯಾ ಸಂಪುಟದಿಂದ ತಮಿಳುನಾಡು ಸಾರಿಗೆ ಸಚಿವ ಸೆಂಥಿಲ್ ಬಾಲಾಜಿ ವಜಾ

ಅಚ್ಚರಿಯ ಬೆಳವಣಿಗೆಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಸೋಮವಾರ ಸಾರಿಗೆ ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಸಚಿವ....

ಚೆನ್ನೈ: ಅಚ್ಚರಿಯ ಬೆಳವಣಿಗೆಯಲ್ಲಿ, ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರು ಸೋಮವಾರ ಸಾರಿಗೆ ಸಚಿವ ವಿ.ಸೆಂಥಿಲ್ ಬಾಲಾಜಿ ಅವರನ್ನು ಸಚಿವ ಸಂಪುಟದಿಂದ ಕೈಬಿಟ್ಟಿದ್ದಾರೆ.

ಸಂಪುಟದಿಂದ ಬಾಲಾಜಿ ಅವರನ್ನು ವಜಾಗೊಳಿಸುವಂತೆ ಜಯಲಲಿತಾ ಅವರು ಮಾಡಿದ ಶಿಫಾರಸ್ಸನ್ನು ತಮಿಳುನಾಡು ರಾಜ್ಯಪಾಲ ಕೆ.ರೋಸಯ್ಯ ಅವರು ಅಂಗೀಕರಿಸಿದ್ದಾರೆ ಎಂದು ರಾಜಭವನದ ಮೂಲಗಳು ತಿಳಿಸಿವೆ.

ಇನ್ನು ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಎಐಎಡಿಎಕೆ ಪ್ರಧಾನ ಕಚೇರಿ, ಪಕ್ಷದ ಕರುರ್ ಜಿಲ್ಲಾ ಕಾರ್ಯದರ್ಶಿ ಹುದ್ದೆಯಿಂದಲೂ ಸೆಂಥಿಲ್ ಬಾಲಾಜಿ ಅವರನ್ನು ಮುಕ್ತಗೊಳಿಸಲಾಗಿದೆ ಎಂದು ತಿಳಿಸಿದೆ.

ಸೆಂಥಿಲ್ ಬಾಲಾಜಿ ಹೊಂದಿದ್ದ ಸಾರಿಗೆ ಖಾತೆಯನ್ನು ಈಗ ಕೈಗಾರಿಕಾ ಸಚಿವ ಪಿ.ತಂಗಮಣಿ ಅವರಿಗೆ ವಹಿಸಲಾಗಿದೆ. ಅಲ್ಲದೆ ಹೆಚ್ಚುವರಿಯಾಗಿ ಪಕ್ಷದ ಕರುರ್ ಜಿಲ್ಲಾ ಕಾರ್ಯದರ್ಶಿಯ ಜವಾಬ್ದಾರಿಯನ್ನು ತಂಗಮಣಿಗೆ ನೀಡಲಾಗಿದೆ.

ದೀರ್ಘಕಾಲದಿಂದ ಜಯಲಲಿತಾ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ಸೆಂಥಿಲ್ ಬಾಲಾಜಿ ಅವರನ್ನು ದಿಢೀರ್ ಸಚಿವ ಸ್ಥಾನ ಹಾಗೂ ಪಕ್ಷದಿಂದಲೂ ಕೈಬಿಟ್ಟಿರುವುದು ಅಚ್ಚರಿ ಮೂಡಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT