ದೇಶ

ಯಾಕೂಬ್ ಮರಣದಂಡನೆಗೆ ತಡೆ ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿದ ಸುಪ್ರೀಂ

1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮೊನ್‌ ಮರಣದಂಡನೆ ಸಂಬಂಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್...

ನವದೆಹಲಿ: 1993ರ ಮುಂಬೈ ಸರಣಿ ಸ್ಫೋಟದ ಅಪರಾಧಿ ಯಾಕೂಬ್ ಮೆಮೊನ್‌ ಮರಣದಂಡನೆ ಸಂಬಂಧ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಮಂಗಳವಾರಕ್ಕೆ ಮುಂದೂಡಿದೆ.

ಹಲವು ಗಣ್ಯರು ಯಾಕೂಬ್‌ಗೆ ವಿಧಿಸಲಾಗಿರುವ ಮರಣದಂಡನೆಯನ್ನು ಮರುಪರಿಶೀಲಿಸಬೇಕೆಂದು ಆಗ್ರಹಿಸಿದ್ದರು. ಅಲ್ಲದೆ ಸುಪ್ರೀಂಕೋರ್ಟ್ ಯಾಕೂಬ್‌ನ ಕ್ಯುರೇಟಿವ್ ಅರ್ಜಿ ತಿರಸ್ಕರಿಸಲು ತೆಗೆದುಕೊಂಡ ನಿರ್ಣಯದ ಬಗ್ಗೆಯೂ ಪ್ರಶ್ನಿಸಿಕೊಂಡಿದ್ದು ಇಂದು ಯಾವುದೇ ನಿರ್ಧಾರ ಪ್ರಕಟಿಸದೇ ನಾಳೆಗೆ ವಿಚಾರಣೆಯನ್ನು ಮುಂದೂಡಿದೆ.

ಯಾಕೂಬ್ ಕ್ಯುರೇಟಿವ್ ಅರ್ಜಿ ತಿರಸ್ಕೃತವಾಗಿರುವಲ್ಲಿ ನ್ಯಾ.ಎ.ಆರ್.ದವೆ ಮತ್ತು ನ್ಯಾ.ಕುರಿಯನ್ ಜೋಸೆಫ್ ಅವರಿದ್ದ ಪೀಠದಲ್ಲಿಯೇ ವಿರೋಧ ಅಭಿಪ್ರಾಯಗಳು ವ್ಯಕ್ತವಾಗಿದೆ. ಕ್ಯುರೇಟಿವ್ ಅರ್ಜಿ ಬಗ್ಗೆ ಇರುವ ನಿಯಮಗಳನ್ನು ವಿವರಿಸುವಂತೆ ಅಟಾರ್ನಿ ಜನರಲ್‌ಗೆ ಪೀಠ ಹೇಳಿದೆ. ಅರ್ಜಿ ಸಂಬಂಧಿಸಿದಂತೆ ನ್ಯಾ.ಜೋಸೆಫ್‌ಗೆ ಹಲವು ಅನುಮಾನಗಳು ಕಾಡಿದರೆ, ನ್ಯಾ.ದವೆ ಒಂದು ಅರ್ಜಿಯನ್ನು ಈ ರೀತಿ ನಡೆಸಿಕೊಂಡರೆ, ನ್ಯಾಯ ಪ್ರಕ್ರಿಯೆಗೇ ಕೊನೆಯೇ ಇಲ್ಲದಂತಾಗುತ್ತದೆ,' ಎಂದು ಹೇಳಿದ್ದಾರೆ.

1993ರ ಮುಂಬಯಿ ಸರಣಿ ಸ್ಫೋಟ ಪ್ರಕರಣದ ಆರೋಪಿಗಳನ್ನು ದೋಷಿಗಳೆಂದು ನಿರ್ಧರಿಸಿಯಾಗಿದೆ. ಈ ಸಂದರ್ಭದಲ್ಲಿ ಅದರ ಪರಿಶೀಲನೆ ಸಾಧ್ಯವಿಲ್ಲ, ಎಂದು ಕೋರ್ಟ್ ಸ್ಪಷ್ಟಪಡಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Geneva ಸಭೆಯಲ್ಲಿ ಭಾರತದ ವಿರುದ್ಧ ಟೀಕೆ; ‘ರಾಜಕೀಯ ಪ್ರೇರಿತ ಹೇಳಿಕೆಗಳ ಒಪ್ಪಲ್ಲ’ ಎಂದ MEA, ವಿಶ್ವಸಂಸ್ಥೆ ಸಮಿತಿ ವಿರುದ್ಧ ಕಿಡಿ..!

'ವಿರೋಧವಿದ್ದರೂ ಮೋಹನ್ ಭಾಗವತ್ ಅಮೆರಿಕಕ್ಕೆ ಯಾಕೆ ಹೋದ್ರು? ಮಹಾರಾಷ್ಟ್ರ ಕಾಂಗ್ರೆಸ್ ಶಾಸಕ ನಾನಾ ಪಟೋಲೆ ಪ್ರಶ್ನೆ!

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!